Home / ಲೇಖನ / ವಿಜ್ಞಾನ / ಪ್ಲೋರೋ ಕಾರ್‍ಬನ್ ಹೊಸ ರಕ್ತ

ಪ್ಲೋರೋ ಕಾರ್‍ಬನ್ ಹೊಸ ರಕ್ತ

ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ್ಸ್‌ನಂತ ಮಹಾರೋಗ ತಗುಲಬಹುದು ಮತ್ತು ದುಬಾರಿ ಬೆಲೆ ಕೊಟ್ಟು ಬಡವರಿಗೆ ಕೊಳ್ಳಲಾಗದಿರಬಹುದು. ಇಂಥಹ ಅಡ್ಡಪರಿಣಾಮಗಳನ್ನು ಹೋಗಲಾಡಿಸಲೆಂದೇ ವಿಜ್ಞಾವಿಗಳು ‘ಪ್ಲೋರೋ ಕಾರ್‍ಬನ್’ ನಿಂದ ರೋಗಿಗೆ ರಕ್ತವೃದ್ಧಿಯಾಗುವ ಸಂಶೋಧನೆಯನ್ನು ಮಾಡಿದ್ದಾರೆ. (ಇಲ್ಲಿ ರಕ್ತದ ವರ್‍ಗ ಸಹಿತ ಬದಲಾಗಬಹುದು)

ಅಮೇರಿಕಾದ ವಿಜ್ಞಾನಿಗಳಾದ ಡಾ|| ಪ್ರಾಂಕ್‌ಗೊರನ್ ಮತ್ತು ಡಾ|| ರೆಲ್ಯಾಂಡ್ ಕ್ಲಾರ್‍ಕ್‌ರು ಇದರ ಅದ್ಭುತ ಗುಣವನ್ನು ಬಯಲಿಗೆಳೆದರು. ಫ್ಲೂರೋ ಕಾರ್‍ಬನನ್ನು ದೇಹಕ್ಕೆ ಸೇರಿಸಿದರೆ ಅಡ್ಡಪರಿಣಾಮಗಳಾಗದೇ ಅದು ರಕ್ತವು ಎಷ್ಟು ಅಂಗಾರಾಮ್ಲ, ಆಮ್ಲಜನಕಗಳನ್ನು ಹೀರಿಕೊಳ್ಳುವುದೋ ಅದರ ೧೫ ಪಾಲಿನಷ್ಟು ಅಧಿಕವಾಗಿ ಹೀರಿಕೊಂಡು ರೋಗಿ ಸಾಯುವುದನ್ನು ತಪ್ಪಿಸಬಲ್ಲದು ಎಂದು ದೃಧೀಕರಿಸುತ್ತಾರೆ.

೧೯೭೨ ರಲ್ಲಿ ಅಮೇರಿಕಾದ ಡಾ || ವಿಲಿಯಂ ಕೋಸೆನ್‌ಬಾಂ ಅವರು ಇಲಿಗಳ ಮೇಲೆ ಅವುಗಳ ರಕ್ತದ ಪ್ರತಿಶತ ೭೫ ರಷ್ಟು ಪ್ರಮಾಣದಲ್ಲಿ ಫ್ಲೂರೋ ಕಾರ್‍ಬನನ್ನೂ ಪೂರೈಸಿ ನೋಡಿದರು. ಅದರಿಂದ ಇಲಿಗಳ ಮಿದುಳು ಮತ್ತು ಹೃದಯದ ಕ್ರಿಯೆಗಳಲ್ಲಿ ವ್ಯತ್ಯಾಸವುಂಟಾಗಲಿಲ್ಲ. ಬಹುಬೇಗನೆ ಫ್ಲೂರೋಕಾರ್ಬನ್ ಅಂಶ ದೇಹದಿಂದ ಮಾಯವಾಗಿ ರಕ್ತವು ಅಧಿಕಗೊಳ್ಳುತ್ತಿರುವುದು ಕಂಡು ಬಂದಿತು. ಇಲಿ ಮತ್ತು ನಾಯಿಗಳ ದೇಹಕ್ಕೆ ಫ್ಲೂರೋಕಾರ್‍ಬನನ್ನು ಪ್ರಯೋಗಿಸಿ ಅವು ದೀರ್‍ಘಕಾಲ ಏನೂ ತೊಂದರೆ ಇಲ್ಲದೇ ಬದುಕಿದ್ದನ್ನು ಮನಗಂಡರು.

ಹಾರ್ವರ್ಡ್‌ ವಿಶ್ವವಿದ್ಯಾಲಯರಲ್ಲಿ ೧,೫೦೦ ಕ್ಕಿಂತ ಹೆಚ್ಚುರ ರೀತಿ ಫ್ಲೂರೋ ಕಾರ್‍ಬನ ಮಾದರಿ ಚುಚ್ಚು ಮದ್ದುಗಳನ್ನು ತಯಾರಿಸಿ ಅಧ್ಯಯನ ಮಾಡುವ ಕಾರ್‍ಯ ಮುಂದುವರೆದಿದೆ. ಇದರಲ್ಲಿ ಯಾವ ಮಾದರಿಯ ಪ್ರಯೋಗದಿಂದ ಬಲುಬೇಗನೆ ತಾನಾಗಿ ರಕ್ತತುಂಬಿಗೊಳ್ಳುತ್ತದೆ ಎಂಬುದರ ಸೂಕ್ಷ್ಮ ಪರೀಕ್ಷೆಯೂ ನಡೆಯುತ್ತದೆ. ಈ ಶತಮಾನದ ಕೊನೆಗೆ ರಕ್ತಹಾನಿಯ ಅಗತ್ಯವಿಲ್ಲದೇ ನಿಜರಕ್ತವಿಲ್ಲದೇ ಹೊಸ ಮಾದರಿಯ ರಕ್ತ ಗಳಿಸುವ ಸಂಶೋಧನೆ ಬೆಳಕಿಗೆ ಬರುತ್ತದೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್