Home / ಲೇಖನ / ವಿಜ್ಞಾನ / ರಕ್ತದ ಚಲನೆ ಮತ್ತು ಹೃದಯದ ಬಡಿತ

ರಕ್ತದ ಚಲನೆ ಮತ್ತು ಹೃದಯದ ಬಡಿತ

ಹೃದಯದ ಪ್ರತಿ ಬಡಿತದಲ್ಲೂ ದೇಹದಲ್ಲಿ ಸುತ್ತಿ ತನ್ನೆಡೆಗೆ ಬಂದ ೨೧/೨ ಜೌನ್ಸ್ (೭೦ ಗ್ರಾಂ)ನಷ್ಟು ರಕ್ತವನ್ನು ಪಂಪ್‌ಮಾಡುತ್ತಿರುತ್ತದೆ. ಇದು ಮೋಹ, ಮಧ, ಮಾತ್ಸರ್‍ಯ, ಮತ್ತು ದೈಹಿಕ ಶ್ರಮಕ್ಕೆ ಅನುಗುಣವಾಗಿ ಪ್ರತಿನಿಮಿಷದಲ್ಲಿ೬ ರಿಂದ ೩೫ ಲೀಟರ್ (೨೦೦ ರಿಂದ ೧೨೦೦ ಜಾನ್ಸ್)ವರೆಗೂ ಏರುಪೇರಾಗಬಹುದು. ಸರಾಸರಿ ಒಂದು ನಿಮಿಷದಲ್ಲಾಗುವ ೭೦ ಬಡಿತದಲ್ಲಿ ಸು ೫೦೦೦ ಗ್ರಾಂ. ೧೫ ಕೆ.ಜಿ.) ಆಗುತ್ತದೆ. ಇದೇ ಲೆಕ್ಕದಲ್ಲಿ ಮುಂದುವರಿದು ನೋಡಿದಾಗ ಒಂದು ವರ್ಷದಲ್ಲಿ ಸು. ೬ ಲಕ್ಷ ೮೦ ಸಾವಿರ ಗ್ರ್ಯಾಮ್ ಅಥವಾ ೩೧ ಲಕ್ಷ ಲೀಟರ್ ನಷ್ಟು ರಕ್ತ ಪಂಪ್ ಆಗಿರುವುದನ್ನು ಕಂಡು ಯಾರೊಬ್ಬರಿಗೂ ಈ ಅದ್ಭುತ ಪಂಪ್ ಬಗ್ಗೆ ಅಶ್ಚರ್‍ಯ ಅನ್ನಿಸದೇ ಇರಲಾರರು. ರಕ್ತ ಹೃದಯದಿಂದ ಕಾಲಿನವರೆಗೆ ಒಂದು ನಿಮಿಷಕ್ಕೂ ಕಡಿಮೆ ಅವಧಿಯಲ್ಲಿಯೇ ಬರುತ್ತದೆ. ಈ ಅಂಶವನ್ನು ಮೊದಲಿಗೆ ಹೊರಗೆಡವಿದ್ದವರು ವಿಲಿಯಂ ಹಾರ್‍ವೆ (೧೫೭೮-೧೬೭೫) ಆದರೆ ಇವನು ಹೃದಯದ ಬಡಿತದ ಬಗೆಗೆ ತಿಳಿಯಲಾಗದೇ ಹತಾಶನಾಗಿದ್ದ. ರಕ್ತ ಹೃದಯದಿಂದ ತದೇಕವಾಗಿ ಪಂಪ್ ಆಗಿದ್ದರೆ ದೇಹದ ಯಾವುದೇ ಜೀವಕೋಶಗಳನ್ನು ಜೀವಂತವಾಗಿಯೂ ಚುರುಕಾಗಿಯೂ ಇಡಲು ಸಾಧ್ಯವಿಲ್ಲ ಜೀವಕೋಶಗಳ ಉಳುವಿಗೆ ಬೇಕಾದ ಆಮ್ಲಜನಕ ಈ ರಕ್ತದಿಂದ ಒದಗುತ್ತಿರುತ್ತದೆ. ಆಮ್ಲಜನಕ ರಕ್ತ ದೇಹದ ಎಲ್ಲ ಜೀವಕೋಶಗಳಿಗೂ ತಲುಪಿ ಅಲ್ಲಿಂದ ಆಮ್ಲ ಜನಕಕಳೆದುಕೊಂಡ ರಕ್ತಹೃದಯದ ಮೇಲ್ಬಾಗದ ಬಲ ಕವಾಟಿಗೆ ಬರುತ್ತದೆ. ಈ ಭಾಗಕ್ಕೆ ಬಂದ ರಕ್ತ ಬಲ ಶ್ವಾಸಕೋಶಕ್ಕೆ ಪಂಪ್ ಆಗುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...