Home / ಲೇಖನ / ಇತರೆ / ಸತ್ತು ಬದುಕಿರುವರು

ಸತ್ತು ಬದುಕಿರುವರು

ಇಲ್ಲಿ ಈ ನೆಲದಲ್ಲಿ ಕೆಲವರು ಬದುಕಿದ್ದಾಗಲೇ ಸತ್ತಂತಿರುವರು. ಇನ್ನು ಕೆಲವರು ಸತ್ತರೂ ಇನ್ನೂ ಬದುಕಿರುವರು.

ನಾನು ೧೯೯೧ರಿಂದಲೂ ತಿರುಪತಿ ತಿಮ್ಮಪ್ಪನ ಬಳಿ ಹೋಗಿ ಬರುತ್ತಲೇ ಇದ್ದೇನೆ. ಪ್ರತಿ ಬಾರಿ. ಅಲ್ಲಿ ನನಗೆ ತೀರಾ ಆಕರ್‍ಷಣೆಯೆಂದರೆ…. ತಿರುಮಲ ಮಂದಿರದ ಪ್ರವೇಶ ಬಾಗಿಲಲ್ಲೇ ಶ್ರೀಕೃಷ್ಣ ದೇವರಾಯ ಭಯಭಕ್ತಿಲಿ ಕರ ಮುಗಿದು ಶೋಭಾಯನಮಾನವಾಗಿ ನಿಂತು ನಮ್ಮನ್ನೆಲ್ಲ ಸ್ವಾಗತಿಸುತ್ತಿರುವ ಪರಿಗೆ ತನ್ನ ಎಡ ಮತ್ತು ಬಲಭಾಗದಲ್ಲಿ ಧರ್‍ಮಪತ್ನಿಯರೂ ಕೂಡಾ ಕರ ಮುಗಿದು ಪ್ರಸನ್ನವದನರಾಗಿ ನಿಂತಿರುವ ಭಂಗಿಗೆ ಬೆರಗಾದೆ.

ವಿಜಯನಗರ ನಿರ್‍ಮಾಣ ತೇಜ ಕನ್ನಡ ರಾಜ್ಯ ರಮಾರಮಣನೆಂದೇ ಖ್ಯಾತಿ ಪ್ರಖ್ಯಾತಿ ಪಡೆದಿದ್ದ ಶ್ರೀಕೃಷ್ಣದೇವರಾಯನ ಕಾಲದಲ್ಲಿ ಮುತ್ತುರತ್ನ ವಜ್ರವೈಡೂರ್‍ಯಗಳನ್ನು ರಾಶಿರಾಶಿ ಹಾದಿಬೀದಿಯಲ್ಲಿ ಬಳ್ಳದಿಂದ ಅಳೆದು ಮಾರಿದ ಕಾಲದಲ್ಲಿದ್ದನೆಂಬುದಕ್ಕಿಂತ ಈಗ ಹೇಗೆ ಅಲ್ಲಿ ನಿಂತಿದ್ದಾನೆ. ಅಲ್ಲಿಯು ಸಲ್ಲಿದವ ಇಲ್ಲಿಯೂ ಹೇಗೆ ಸಲ್ಲುತ್ತಿರುವವನೆಂಬುದಿಲ್ಲಿ ಬಹಳ ಮುಖ್ಯವಾಗುವುದು!

ಶ್ರೀಕೃಷ್ಣದೇವರಾಯನಿಲ್ಲಿ ಜೀವಂತವಿದ್ದಾನೆ ಅನಿಸುವುದು, ಬಾಳಿ ಬದುಕಿ ಸತ್ತಿಲ್ಲ. ಸತ್ತು ಇಲ್ಲಿ ಬದುಕಿದ್ದಾನೆ ಎಂದು ನಮ್ಮ ಕಣ್ಣಿದುರಿಗೆ ಮೆರವಣಿಗೆ ಹೊರಡುವನು. ಇದಕ್ಕಿಂತ ಭಾಗ್ಯ ಇನ್ನಿಲ್ಲವೆನಿಸುವುದು.

ಶ್ರೀಕೃಷ್ಣದೇವರಾಯ ತಿರುಪತಿ ತಿಮ್ಮಪ್ಪನ ಪರಮ ಆರಾಧಕನಾಗಿದ್ದನಲ್ಲದೆ, ಇಬ್ಬರು ಸತಿಯರೊಂದಿಗೆ ಪ್ರತಿ ತಿಂಗಳಿಗೊಮ್ಮೆ ಬಂದು ಅಮೂಲ್ಯವಾದ ಪಚ್ಚೆ ಮುತ್ತು ರತ್ನ, ವಜ್ರ, ವೈಡೂರ್‍ಯ, ಚಿನ್ನವನ್ನರ್‍ಪಿಸಿ ತೆರಳಿದ್ದಕ್ಕೆ ಇಲ್ಲಿ ದಾಖಲೆಗಳಿವೆ! ಬರೀ ಚಿನ್ನದಿಂದ ನಿರ್‍ಮಿಸಿಕೊಟ್ಟ ಆನಂದ ನಿಲಯಂ ಕೂಡಾ ಇವರ ಕೊಡುಗೆಯಾಗಿದೆ.

– ಹೀಗೆ ಶ್ರೀಕೃಷ್ಣದೇವರಾಯ ಹಾಗೂ ಇಬ್ಬರು ಧರ್‍ಮಪತ್ನಿಯರೂ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಇಂದಿಗೂ ಜೀವಂತಿರುವರು. ಎಲ್ಲರ ಮನೆ ಮನಗಳಲ್ಲಿ ನೆಲೆ ನಿಂತಿರುವರು, ಜೀವನವೆಂದರೆ… ಇದಕ್ಕಿಂತ ಹೆಚ್ಚಿನದು ಇರುವುದಿಲ್ಲವಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...