Home / ಲೇಖನ / ಇತರೆ / ಸತ್ತು ಬದುಕಿರುವರು

ಸತ್ತು ಬದುಕಿರುವರು

ಇಲ್ಲಿ ಈ ನೆಲದಲ್ಲಿ ಕೆಲವರು ಬದುಕಿದ್ದಾಗಲೇ ಸತ್ತಂತಿರುವರು. ಇನ್ನು ಕೆಲವರು ಸತ್ತರೂ ಇನ್ನೂ ಬದುಕಿರುವರು.

ನಾನು ೧೯೯೧ರಿಂದಲೂ ತಿರುಪತಿ ತಿಮ್ಮಪ್ಪನ ಬಳಿ ಹೋಗಿ ಬರುತ್ತಲೇ ಇದ್ದೇನೆ. ಪ್ರತಿ ಬಾರಿ. ಅಲ್ಲಿ ನನಗೆ ತೀರಾ ಆಕರ್‍ಷಣೆಯೆಂದರೆ…. ತಿರುಮಲ ಮಂದಿರದ ಪ್ರವೇಶ ಬಾಗಿಲಲ್ಲೇ ಶ್ರೀಕೃಷ್ಣ ದೇವರಾಯ ಭಯಭಕ್ತಿಲಿ ಕರ ಮುಗಿದು ಶೋಭಾಯನಮಾನವಾಗಿ ನಿಂತು ನಮ್ಮನ್ನೆಲ್ಲ ಸ್ವಾಗತಿಸುತ್ತಿರುವ ಪರಿಗೆ ತನ್ನ ಎಡ ಮತ್ತು ಬಲಭಾಗದಲ್ಲಿ ಧರ್‍ಮಪತ್ನಿಯರೂ ಕೂಡಾ ಕರ ಮುಗಿದು ಪ್ರಸನ್ನವದನರಾಗಿ ನಿಂತಿರುವ ಭಂಗಿಗೆ ಬೆರಗಾದೆ.

ವಿಜಯನಗರ ನಿರ್‍ಮಾಣ ತೇಜ ಕನ್ನಡ ರಾಜ್ಯ ರಮಾರಮಣನೆಂದೇ ಖ್ಯಾತಿ ಪ್ರಖ್ಯಾತಿ ಪಡೆದಿದ್ದ ಶ್ರೀಕೃಷ್ಣದೇವರಾಯನ ಕಾಲದಲ್ಲಿ ಮುತ್ತುರತ್ನ ವಜ್ರವೈಡೂರ್‍ಯಗಳನ್ನು ರಾಶಿರಾಶಿ ಹಾದಿಬೀದಿಯಲ್ಲಿ ಬಳ್ಳದಿಂದ ಅಳೆದು ಮಾರಿದ ಕಾಲದಲ್ಲಿದ್ದನೆಂಬುದಕ್ಕಿಂತ ಈಗ ಹೇಗೆ ಅಲ್ಲಿ ನಿಂತಿದ್ದಾನೆ. ಅಲ್ಲಿಯು ಸಲ್ಲಿದವ ಇಲ್ಲಿಯೂ ಹೇಗೆ ಸಲ್ಲುತ್ತಿರುವವನೆಂಬುದಿಲ್ಲಿ ಬಹಳ ಮುಖ್ಯವಾಗುವುದು!

ಶ್ರೀಕೃಷ್ಣದೇವರಾಯನಿಲ್ಲಿ ಜೀವಂತವಿದ್ದಾನೆ ಅನಿಸುವುದು, ಬಾಳಿ ಬದುಕಿ ಸತ್ತಿಲ್ಲ. ಸತ್ತು ಇಲ್ಲಿ ಬದುಕಿದ್ದಾನೆ ಎಂದು ನಮ್ಮ ಕಣ್ಣಿದುರಿಗೆ ಮೆರವಣಿಗೆ ಹೊರಡುವನು. ಇದಕ್ಕಿಂತ ಭಾಗ್ಯ ಇನ್ನಿಲ್ಲವೆನಿಸುವುದು.

ಶ್ರೀಕೃಷ್ಣದೇವರಾಯ ತಿರುಪತಿ ತಿಮ್ಮಪ್ಪನ ಪರಮ ಆರಾಧಕನಾಗಿದ್ದನಲ್ಲದೆ, ಇಬ್ಬರು ಸತಿಯರೊಂದಿಗೆ ಪ್ರತಿ ತಿಂಗಳಿಗೊಮ್ಮೆ ಬಂದು ಅಮೂಲ್ಯವಾದ ಪಚ್ಚೆ ಮುತ್ತು ರತ್ನ, ವಜ್ರ, ವೈಡೂರ್‍ಯ, ಚಿನ್ನವನ್ನರ್‍ಪಿಸಿ ತೆರಳಿದ್ದಕ್ಕೆ ಇಲ್ಲಿ ದಾಖಲೆಗಳಿವೆ! ಬರೀ ಚಿನ್ನದಿಂದ ನಿರ್‍ಮಿಸಿಕೊಟ್ಟ ಆನಂದ ನಿಲಯಂ ಕೂಡಾ ಇವರ ಕೊಡುಗೆಯಾಗಿದೆ.

– ಹೀಗೆ ಶ್ರೀಕೃಷ್ಣದೇವರಾಯ ಹಾಗೂ ಇಬ್ಬರು ಧರ್‍ಮಪತ್ನಿಯರೂ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಇಂದಿಗೂ ಜೀವಂತಿರುವರು. ಎಲ್ಲರ ಮನೆ ಮನಗಳಲ್ಲಿ ನೆಲೆ ನಿಂತಿರುವರು, ಜೀವನವೆಂದರೆ… ಇದಕ್ಕಿಂತ ಹೆಚ್ಚಿನದು ಇರುವುದಿಲ್ಲವಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...