Home / ಲೇಖನ / ಇತರೆ / ಗಿಳಿಯ ಪುಣ್ಯ

ಗಿಳಿಯ ಪುಣ್ಯ

ಸುಮಾರು ಇನ್ನೂರು ವರ್‍ಷಗಳ ಹಿಂದಿನ ಕಥೆಯಿದು. ಬಲು ಸುಂದರ ನಾಡು ಕೇರಳದ ಕೊಚ್ಚಿನ್‌ನಲ್ಲಿ ಒಬ್ಬ ನಂಬೂದಿರಿ ಪಾಡ್ ವಾಸವಾಗಿದ್ದ.

ಈತ ಸರಳ ಸಜ್ಜನ ಉದಾರಿ ದಯಾಪರ ಸೌಮ್ಯ ವ್ಯಕ್ತಿಯಾಗಿದ್ದ. ಈತ ಒಂದು ಸುಂದರವಾದ ಗಿಳಿಯೊಂದನ್ನು ಸಾಕಿದ್ದ. ಈ ಗಿಳಿಯೊಂದಿಗೆ ಮೂರು ಹೊತ್ತು ಮಾತನಾಡುವುದು, ಕಾಲ ಕಳೆಯುವುದು, ಆಟ ಆಡುತ್ತಾ ಕಾಲ ಕಳೆಯುತ್ತಿದ್ದ.

ಗಿಳಿಯು ಮಾತನಾಡುವುದನ್ನು ಕೇಳಿ, ಹಾಡುವುದನ್ನು ಕೇಳಿ ನಲಿನಲಿದಾಡುವುದನ್ನು ಕಂಡು, ಮನೆಯ ಯಜಮಾನನೇನು ನೆರೆಹೊರೆಯವರೂ ಗಿಳಿಯ ವರ್‍ತನೆಗೆ ಮಾರು ಹೋಗಿದ್ದರು.

ಗಿಳಿಯನ್ನು ಬಿಟ್ಟು ಮನೆಯವರು, ಮನೆಯವರನ್ನು ಬಿಟ್ಟು ಗಿಳಿಯು ಅರೆಘಳಿಗೆ ಇರುತ್ತಿರಲಿಲ್ಲ. ಗಿಳಿಗೆ ನಿತ್ಯ ಬಾಳೆಹಣ್ಣು, ದ್ರಾಕ್ಷಿ, ಸೇಬು, ಸೀಬೆ, ಸಪೋಟ, ಮೂಸಂಬಿ, ಕಿತ್ತಲೆ, ಮಾವು, ಹಲಸು…. ಹೀಗೆ ನಾನಾ ತರತರದ ಹಣ್ಣುಹಂಪಲು ನೀರು ಇತ್ತು ಅದನ್ನು ಕಣ್ಣಲ್ಲಿ ಕಣ್ಣಿಟ್ಟು ಎಲ್ಲರೂ ನೋಡಿಕೊಳ್ಳುತ್ತಿದ್ದರು.

ಹೀಗಿರಲಾಗಿ… ಒಂದು ದಿನ ಕಳ್ಳಬೆಕ್ಕೊಂದು ಉಪಾಯ ಮಾಡಿ ಮುದ್ದಿನ ಸುಂದರವಾದ ಗಿಳಿಯನ್ನು ರಾತ್ರೋರಾತ್ರಿ ಕೊಂದು ತಿಂದುಬಿಟ್ಟಿತು. ಮನೆಯ ಯಜಮಾನ ನಂಬೂದಿರಿ ಪಾಡ್ ಮೊದಲುಗೊಂಡು ಮನೆಯ ಜನರೂ ನೆರೆಹೊರೆಯವರೂ ಅತ್ತರು. ಕಳ್ಳ ಬೆಕ್ಕನ್ನು ಜಗ್ಗ ಶಪಿಸಿದರು. “ಚೆಂದದಿ ಅಂದದಿ ಸಾಕಿದ್ದ ಗಿಳಿಯನ್ನು ಕಳ್ಳ ಬೆಕ್ಕಿಗೆ ಕೊಟ್ಟು ಬಿಟ್ಟೆವಲ್ಲಾ….?” ಎಂದು ಎರಡು ಮೂರು ದಿನ ರೋಧಿಸಿದರು.

ಆ ಗಿಳಿಯ ಹೆಸರಿನಲ್ಲಿ ಸಂತಾಪಸಭೆ ಜರುಗಿಸಿದರು. ಮೂರು ದಿನದ ತಿಥಿ, ಹಾಗೂ ಶ್ರಾದ್ಧವನ್ನು ಹಮ್ಮಿಕೊಂಡರು. ಶಾಸ್ತ್ರೋಕ್ತವಾಗಿ ಗಿಳಿಗೆ ವಿಧಿವಿಧಾನದಂತೆ ೧೬ ಜನ ಬ್ರಾಹ್ಮಣರಿಗೆ ಊಟ ಬಡಿಸಿದರು.

ಇದು ಪ್ರತಿ ವರ್‍ಷ ಗಿಳಿಯ ಹೆಸರಿನಲ್ಲಿ ಶ್ರಾದ್ಧ ಏರ್‍ಪಡಿಸಿ ಊಟ ಬಡಿಸುವ ಪರಂಪರೆ, ಸಂಪ್ರದಾಯ, ವಿಧಿವಿಧಾನ ಇಂದಿಗೂ ಮುಂದುವರೆದು ಕೊಂಡು ಬಂದಿದೆ.

ಗಿಳಿ ಶ್ರಾದ್ಧವನ್ನು ಇಂದಿಗೂ ಕೈಬಿಟ್ಟಿಲ್ಲ. ಈಗ ಎರಡು ಜನ ಬ್ರಾಹ್ಮಣರಿಗೆ ಮಾತ್ರ ಊಟ ಬಡಿಸುವ ಪದ್ಧತಿಯನ್ನು ಮುಂದುವರೆಸಿಕೊಂಡು ಬಂದಿರುವರು.

ಪ್ರಾಣಿ-ಪಕ್ಷಿ-ಮನುಷ್ಯರೆಲ್ಲ ಒಂದೇ! ಮಾನವೀಯ ಸಂಬಂಧ ಮುಖ್ಯ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...