Home / ಲೇಖನ / ಇತರೆ / ಗಿಳಿಯ ಪುಣ್ಯ

ಗಿಳಿಯ ಪುಣ್ಯ

ಸುಮಾರು ಇನ್ನೂರು ವರ್‍ಷಗಳ ಹಿಂದಿನ ಕಥೆಯಿದು. ಬಲು ಸುಂದರ ನಾಡು ಕೇರಳದ ಕೊಚ್ಚಿನ್‌ನಲ್ಲಿ ಒಬ್ಬ ನಂಬೂದಿರಿ ಪಾಡ್ ವಾಸವಾಗಿದ್ದ.

ಈತ ಸರಳ ಸಜ್ಜನ ಉದಾರಿ ದಯಾಪರ ಸೌಮ್ಯ ವ್ಯಕ್ತಿಯಾಗಿದ್ದ. ಈತ ಒಂದು ಸುಂದರವಾದ ಗಿಳಿಯೊಂದನ್ನು ಸಾಕಿದ್ದ. ಈ ಗಿಳಿಯೊಂದಿಗೆ ಮೂರು ಹೊತ್ತು ಮಾತನಾಡುವುದು, ಕಾಲ ಕಳೆಯುವುದು, ಆಟ ಆಡುತ್ತಾ ಕಾಲ ಕಳೆಯುತ್ತಿದ್ದ.

ಗಿಳಿಯು ಮಾತನಾಡುವುದನ್ನು ಕೇಳಿ, ಹಾಡುವುದನ್ನು ಕೇಳಿ ನಲಿನಲಿದಾಡುವುದನ್ನು ಕಂಡು, ಮನೆಯ ಯಜಮಾನನೇನು ನೆರೆಹೊರೆಯವರೂ ಗಿಳಿಯ ವರ್‍ತನೆಗೆ ಮಾರು ಹೋಗಿದ್ದರು.

ಗಿಳಿಯನ್ನು ಬಿಟ್ಟು ಮನೆಯವರು, ಮನೆಯವರನ್ನು ಬಿಟ್ಟು ಗಿಳಿಯು ಅರೆಘಳಿಗೆ ಇರುತ್ತಿರಲಿಲ್ಲ. ಗಿಳಿಗೆ ನಿತ್ಯ ಬಾಳೆಹಣ್ಣು, ದ್ರಾಕ್ಷಿ, ಸೇಬು, ಸೀಬೆ, ಸಪೋಟ, ಮೂಸಂಬಿ, ಕಿತ್ತಲೆ, ಮಾವು, ಹಲಸು…. ಹೀಗೆ ನಾನಾ ತರತರದ ಹಣ್ಣುಹಂಪಲು ನೀರು ಇತ್ತು ಅದನ್ನು ಕಣ್ಣಲ್ಲಿ ಕಣ್ಣಿಟ್ಟು ಎಲ್ಲರೂ ನೋಡಿಕೊಳ್ಳುತ್ತಿದ್ದರು.

ಹೀಗಿರಲಾಗಿ… ಒಂದು ದಿನ ಕಳ್ಳಬೆಕ್ಕೊಂದು ಉಪಾಯ ಮಾಡಿ ಮುದ್ದಿನ ಸುಂದರವಾದ ಗಿಳಿಯನ್ನು ರಾತ್ರೋರಾತ್ರಿ ಕೊಂದು ತಿಂದುಬಿಟ್ಟಿತು. ಮನೆಯ ಯಜಮಾನ ನಂಬೂದಿರಿ ಪಾಡ್ ಮೊದಲುಗೊಂಡು ಮನೆಯ ಜನರೂ ನೆರೆಹೊರೆಯವರೂ ಅತ್ತರು. ಕಳ್ಳ ಬೆಕ್ಕನ್ನು ಜಗ್ಗ ಶಪಿಸಿದರು. “ಚೆಂದದಿ ಅಂದದಿ ಸಾಕಿದ್ದ ಗಿಳಿಯನ್ನು ಕಳ್ಳ ಬೆಕ್ಕಿಗೆ ಕೊಟ್ಟು ಬಿಟ್ಟೆವಲ್ಲಾ….?” ಎಂದು ಎರಡು ಮೂರು ದಿನ ರೋಧಿಸಿದರು.

ಆ ಗಿಳಿಯ ಹೆಸರಿನಲ್ಲಿ ಸಂತಾಪಸಭೆ ಜರುಗಿಸಿದರು. ಮೂರು ದಿನದ ತಿಥಿ, ಹಾಗೂ ಶ್ರಾದ್ಧವನ್ನು ಹಮ್ಮಿಕೊಂಡರು. ಶಾಸ್ತ್ರೋಕ್ತವಾಗಿ ಗಿಳಿಗೆ ವಿಧಿವಿಧಾನದಂತೆ ೧೬ ಜನ ಬ್ರಾಹ್ಮಣರಿಗೆ ಊಟ ಬಡಿಸಿದರು.

ಇದು ಪ್ರತಿ ವರ್‍ಷ ಗಿಳಿಯ ಹೆಸರಿನಲ್ಲಿ ಶ್ರಾದ್ಧ ಏರ್‍ಪಡಿಸಿ ಊಟ ಬಡಿಸುವ ಪರಂಪರೆ, ಸಂಪ್ರದಾಯ, ವಿಧಿವಿಧಾನ ಇಂದಿಗೂ ಮುಂದುವರೆದು ಕೊಂಡು ಬಂದಿದೆ.

ಗಿಳಿ ಶ್ರಾದ್ಧವನ್ನು ಇಂದಿಗೂ ಕೈಬಿಟ್ಟಿಲ್ಲ. ಈಗ ಎರಡು ಜನ ಬ್ರಾಹ್ಮಣರಿಗೆ ಮಾತ್ರ ಊಟ ಬಡಿಸುವ ಪದ್ಧತಿಯನ್ನು ಮುಂದುವರೆಸಿಕೊಂಡು ಬಂದಿರುವರು.

ಪ್ರಾಣಿ-ಪಕ್ಷಿ-ಮನುಷ್ಯರೆಲ್ಲ ಒಂದೇ! ಮಾನವೀಯ ಸಂಬಂಧ ಮುಖ್ಯ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...