Home / ಲೇಖನ / ಇತರೆ / ಅಸ್ಥಿಪಂಜರಗಳ ಕತೆ

ಅಸ್ಥಿಪಂಜರಗಳ ಕತೆ

ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ….! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು.

ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.. ಆಗಸ್ಟ್ ೨೦೧೫ರಲ್ಲಿ ಹೇಳುತ್ತಿವೆ.

ಈ ೯೭ ಅಸ್ಥಿಪಂಜರಗಳು ಸುಮಾರು ಐದು ಸಾವಿರ ವರ್‍ಷಗಳಷ್ಟು ಹಳೆಯದಾದ ಸಣ್ಣ ಮನೆಯೊಂದರಲ್ಲಿದ್ದವುಗಳನ್ನು ಪುರಾತತ್ವ ಶಾಸ್ತ್ರಜ್ಞರು ಎಲ್ಲವನ್ನು ಹೊರಗೆಳೆದಿರುವರು.

ಇವೆಲ್ಲ ಭಾರಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರನ್ನು ಈಶಾನ್ಯ ಚೀನಾದ ಸಣ್ಣ ಮನೆಯಲ್ಲಿ ಒಟ್ಟಿಗೆ ಮಲಗಿಸಿ ಸುಡುತ್ತಿದ್ದರು. ಅದು ಉಳಿದವರಿಗೆ ಹರಡದಿರಲೆಂದು ಬಾಗಿಲು, ಕಿಟಕಿ, ಗವಾಕ್ಷಿ ಏನೆಲ್ಲ ಮುಚ್ಚಿ ಜಾಗ್ರತೆ ಮಾಡುತ್ತಿದ್ದರೆಂದು ಪುರಾತತ್ವ ಶಾಸ್ತ್ರಜ್ಞರು ವಿವರಿಸಿರುವರು.

ಈ ರೀತಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರಲ್ಲಿ ಹದಿಹರೆಯದವರು ಯುವಕರು-ಮಧ್ಯ ವಯಸ್ಕರು ಬಾಲಕರು ಎಲ್ಲ ರೀತಿಯ ವಯಸ್ಕರು ಇರುತ್ತಿದ್ದರೆಂದು ಅಸ್ಥಿಪಂಜರ ತಲೆಬುರುಡೆ ಇತ್ಯಾದಿಗಳನ್ನು ತೋರಿಸಿ ಅಲ್ಲಿದ್ದವರಿಗೆಲ್ಲ ವಿವರಿಸುತ್ತಿದ್ದರು.

ಈಶಾನ್ಯ ಚೀನಾದ ಈ ಭಾಗದಲ್ಲಿ ಲಿಪಿ ಇಲ್ಲದಾಗ ಇಲ್ಲಿನ ಜನರೆಲ್ಲ ಗುಂಪುಗುಂಪಾಗಿ ಸಣ್ಣ ಸಣ್ಣ ಮನೆಗಳಲ್ಲಿ ನೆಲೆಸಿದ್ದರೆಂಬುದನ್ನು ಸಂಶೋಧನೆಗಳು ಹೊರಗೆಡವಿಯಲ್ಲದೆ, ಆಹಾರಕ್ಕಾಗಿ ಮುಖ್ಯವಾಗಿ ಬೇಟೆಯಾಡುತ್ತಿದ್ದರೆಂಬುದನ್ನು ತಜ್ಞರು ಸಂಶೋಧಿಸಿರುವರು.

– ಹೀಗೆ ಸಂಶೋಧನೆಗಳು ತೀವ್ರಗೊಳ್ಳುತ್ತಾ ಹೋದಂತೆಲ್ಲ ಏನೆಲ್ಲ ರಹಸ್ಯಗಳು ಹೊಸ ಹೊಸ ಆವಿಷ್ಕಾರಗಳು ಹೊರಗೆ ಬೀಳಬಹುದೆಂದು ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...