Home / ಲೇಖನ / ಇತರೆ / ಅಸ್ಥಿಪಂಜರಗಳ ಕತೆ

ಅಸ್ಥಿಪಂಜರಗಳ ಕತೆ

ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ….! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು.

ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.. ಆಗಸ್ಟ್ ೨೦೧೫ರಲ್ಲಿ ಹೇಳುತ್ತಿವೆ.

ಈ ೯೭ ಅಸ್ಥಿಪಂಜರಗಳು ಸುಮಾರು ಐದು ಸಾವಿರ ವರ್‍ಷಗಳಷ್ಟು ಹಳೆಯದಾದ ಸಣ್ಣ ಮನೆಯೊಂದರಲ್ಲಿದ್ದವುಗಳನ್ನು ಪುರಾತತ್ವ ಶಾಸ್ತ್ರಜ್ಞರು ಎಲ್ಲವನ್ನು ಹೊರಗೆಳೆದಿರುವರು.

ಇವೆಲ್ಲ ಭಾರಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರನ್ನು ಈಶಾನ್ಯ ಚೀನಾದ ಸಣ್ಣ ಮನೆಯಲ್ಲಿ ಒಟ್ಟಿಗೆ ಮಲಗಿಸಿ ಸುಡುತ್ತಿದ್ದರು. ಅದು ಉಳಿದವರಿಗೆ ಹರಡದಿರಲೆಂದು ಬಾಗಿಲು, ಕಿಟಕಿ, ಗವಾಕ್ಷಿ ಏನೆಲ್ಲ ಮುಚ್ಚಿ ಜಾಗ್ರತೆ ಮಾಡುತ್ತಿದ್ದರೆಂದು ಪುರಾತತ್ವ ಶಾಸ್ತ್ರಜ್ಞರು ವಿವರಿಸಿರುವರು.

ಈ ರೀತಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರಲ್ಲಿ ಹದಿಹರೆಯದವರು ಯುವಕರು-ಮಧ್ಯ ವಯಸ್ಕರು ಬಾಲಕರು ಎಲ್ಲ ರೀತಿಯ ವಯಸ್ಕರು ಇರುತ್ತಿದ್ದರೆಂದು ಅಸ್ಥಿಪಂಜರ ತಲೆಬುರುಡೆ ಇತ್ಯಾದಿಗಳನ್ನು ತೋರಿಸಿ ಅಲ್ಲಿದ್ದವರಿಗೆಲ್ಲ ವಿವರಿಸುತ್ತಿದ್ದರು.

ಈಶಾನ್ಯ ಚೀನಾದ ಈ ಭಾಗದಲ್ಲಿ ಲಿಪಿ ಇಲ್ಲದಾಗ ಇಲ್ಲಿನ ಜನರೆಲ್ಲ ಗುಂಪುಗುಂಪಾಗಿ ಸಣ್ಣ ಸಣ್ಣ ಮನೆಗಳಲ್ಲಿ ನೆಲೆಸಿದ್ದರೆಂಬುದನ್ನು ಸಂಶೋಧನೆಗಳು ಹೊರಗೆಡವಿಯಲ್ಲದೆ, ಆಹಾರಕ್ಕಾಗಿ ಮುಖ್ಯವಾಗಿ ಬೇಟೆಯಾಡುತ್ತಿದ್ದರೆಂಬುದನ್ನು ತಜ್ಞರು ಸಂಶೋಧಿಸಿರುವರು.

– ಹೀಗೆ ಸಂಶೋಧನೆಗಳು ತೀವ್ರಗೊಳ್ಳುತ್ತಾ ಹೋದಂತೆಲ್ಲ ಏನೆಲ್ಲ ರಹಸ್ಯಗಳು ಹೊಸ ಹೊಸ ಆವಿಷ್ಕಾರಗಳು ಹೊರಗೆ ಬೀಳಬಹುದೆಂದು ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ