Home / ಲೇಖನ / ಇತರೆ / ಮ್ಯಾನ್ ಬುಕರ್

ಮ್ಯಾನ್ ಬುಕರ್

೨೦೧೫ರ ಸಾಲಿನ ಪ್ರತಿಷ್ಠಿತ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿ ಹೊರಬಿದ್ದಿದೆ. ಜಾಗತಿಕ ಮಟ್ಟದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಉತ್ತಮ ಕಾದಂಬರಿಗೆ ಈ ನಗದು ಸಾಹಿತ್ಯ ಪುರಸ್ಕಾರ ಲಭಿಸುವುದು.

ಈ ನಗದು ಪ್ರಶಸ್ತಿಯನ್ನು ಮೊತ್ತಮೊದಲ ಬಾರಿಗೆ ೧೯೬೯ರಿಂದಲೂ ಕೊಡಮಾಡುತ್ತಾ ಬಂದಿದೆಯೆಂದು ಲಂಡನ್‌ನಿಂದ ವರದಿಯಾಗಿರುವುದು.

ಭವ್ಯ ಭಾರತದ ಲೇಖಕಿ ಅನುರಾಧಾರಾಯ್‌ ಸೇರಿದಂತೆ ಒಟ್ಟು ೧೩ ಮಂದಿ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿಯಲ್ಲಿ ಈಗಾಗಲೇ ಸ್ಥಾನಮಾನ ಪಡೆದಿರುವರು! ಈ ಪ್ರಶಸ್ತಿ ಪಟ್ಟಿಯಲ್ಲಿ ಹೆಸರು ಸೇರ್‍ಪಡೆಗೊಳ್ಳುವುದೂ ಒಂದು ಹೆಮ್ಮೆಯ ಸಾಧನೆಯೆಂದೇ ಪರಿಗಣಿಸಲ್ಪಡುವರು.

ಅನುರಾಧಾ ರಾಯ್ ಅವರ- “ಸ್ಲೀ ಪಿಂಗ್ ಅನ್ ಜುಪಿಟರ್” ಕೃತಿ ಈ ಪ್ರಶಸ್ತಿಯ ಆಯ್ಕೆ ಪಟ್ಟಿಯಲ್ಲಿದ್ದಾರೆ!

ಈ ಪ್ರಶಸ್ತಿ ಪಟ್ಟಿಯಲ್ಲಿನ ೧೩ ಕೃತಿಗಳಲ್ಲಿ ಬ್ರಿಟನ್ ಲೇಖಕ ಟೊಮ್ ಮ್ಯಾಕ್‌ಕರ್‍ತಿ ಅವರ ‘ಸವೈ ಐಸ್ಲಾಂಡ್, ಆಂಡ್ರೂ ಒ ಹಗನ್ ಅವರ- ದಿ ಇಲ್ಯುಮಿನೇಷನ್, ಭಾರತ ಮೂಲದ ಲೇಖಕ ಸಂಜೀವ್‌ಸಹೊತ ಅವರ ‘ದಿ ಇಯರ್ ಆಫ್ ದಿ ರನ್‌ ವೇಸ್’ ಒಳಗೊಂಡಿವೆ.

ಐವರು ಸದಸ್ಯರನ್ನೊಳಗೊಂಡ ತೀರ್‍ಪುಗಾರರು ಈಗಾಗಲೇ ಒಟ್ಟು ೧೫೬ ಕೃತಿಗಳಲ್ಲಿ ೧೩ ಕೃತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದರಲ್ಲಿ ಆಯ್ದ ಆರು ಕೃತಿಗಳ ಅಂತಿಮ ಪಟ್ಟಿಯನ್ನು ೨೦೧೫ರ ಸೆಪ್ಟೆಂಬರ್‌ನಲ್ಲಿ ಪ್ರಕಟಿಸುವರು.

೨೦೧೫ರ ಅಕ್ಟೋಬರ್ ೧೩ರಂದು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮವಾಗಿ ಘೋಷಿಸುವರು.

ಇದು ೨೦೧೫ರ ಮ್ಯಾನ್‌ಬುಕರ್ ಪ್ರಶಸ್ತಿಯ ರೂಪರೇಷೆಯಾಗಿದ್ದು ಭವ್ಯ ಭಾರತದ ಅನುರಾಧಾ ರಾಯ್ ಅವರಿಗೆ ಈ ಸಾರಿಯ ಪ್ರಶಸ್ತಿಯು ಲಭಿಸಲೆಂದು ನಾವು ನೀವು ಶುಭ ಕೋರೋಣವಲ್ಲವೇ?

ನನ್ನ ಮುದ್ದು ಪುಟಾಣಿಗಳೆ… ನೀವೆಲ್ಲ ಇಂದಿನಿಂದಲೇ ಮನಸ್ಸು ಮಾಡಿ! ನಾನೂ ಇಂಗ್ಲೀಷ್ ಸಾಹಿತ್ಯ ಅಭ್ಯಾಸ ಮಾಡಿ ಇಂಗ್ಲೀಷ್‌ನಲ್ಲಿ ಸಾಧನೆ ಮಾಡಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುತ್ತೇನೆಂಬ ಗುರಿ, ಹಠ, ಸಾಧನೆ ಹೊಂದುವಿರಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...