Home / ಲೇಖನ / ಇತರೆ / ಮ್ಯಾನ್ ಬುಕರ್

ಮ್ಯಾನ್ ಬುಕರ್

೨೦೧೫ರ ಸಾಲಿನ ಪ್ರತಿಷ್ಠಿತ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿ ಹೊರಬಿದ್ದಿದೆ. ಜಾಗತಿಕ ಮಟ್ಟದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಉತ್ತಮ ಕಾದಂಬರಿಗೆ ಈ ನಗದು ಸಾಹಿತ್ಯ ಪುರಸ್ಕಾರ ಲಭಿಸುವುದು.

ಈ ನಗದು ಪ್ರಶಸ್ತಿಯನ್ನು ಮೊತ್ತಮೊದಲ ಬಾರಿಗೆ ೧೯೬೯ರಿಂದಲೂ ಕೊಡಮಾಡುತ್ತಾ ಬಂದಿದೆಯೆಂದು ಲಂಡನ್‌ನಿಂದ ವರದಿಯಾಗಿರುವುದು.

ಭವ್ಯ ಭಾರತದ ಲೇಖಕಿ ಅನುರಾಧಾರಾಯ್‌ ಸೇರಿದಂತೆ ಒಟ್ಟು ೧೩ ಮಂದಿ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿಯಲ್ಲಿ ಈಗಾಗಲೇ ಸ್ಥಾನಮಾನ ಪಡೆದಿರುವರು! ಈ ಪ್ರಶಸ್ತಿ ಪಟ್ಟಿಯಲ್ಲಿ ಹೆಸರು ಸೇರ್‍ಪಡೆಗೊಳ್ಳುವುದೂ ಒಂದು ಹೆಮ್ಮೆಯ ಸಾಧನೆಯೆಂದೇ ಪರಿಗಣಿಸಲ್ಪಡುವರು.

ಅನುರಾಧಾ ರಾಯ್ ಅವರ- “ಸ್ಲೀ ಪಿಂಗ್ ಅನ್ ಜುಪಿಟರ್” ಕೃತಿ ಈ ಪ್ರಶಸ್ತಿಯ ಆಯ್ಕೆ ಪಟ್ಟಿಯಲ್ಲಿದ್ದಾರೆ!

ಈ ಪ್ರಶಸ್ತಿ ಪಟ್ಟಿಯಲ್ಲಿನ ೧೩ ಕೃತಿಗಳಲ್ಲಿ ಬ್ರಿಟನ್ ಲೇಖಕ ಟೊಮ್ ಮ್ಯಾಕ್‌ಕರ್‍ತಿ ಅವರ ‘ಸವೈ ಐಸ್ಲಾಂಡ್, ಆಂಡ್ರೂ ಒ ಹಗನ್ ಅವರ- ದಿ ಇಲ್ಯುಮಿನೇಷನ್, ಭಾರತ ಮೂಲದ ಲೇಖಕ ಸಂಜೀವ್‌ಸಹೊತ ಅವರ ‘ದಿ ಇಯರ್ ಆಫ್ ದಿ ರನ್‌ ವೇಸ್’ ಒಳಗೊಂಡಿವೆ.

ಐವರು ಸದಸ್ಯರನ್ನೊಳಗೊಂಡ ತೀರ್‍ಪುಗಾರರು ಈಗಾಗಲೇ ಒಟ್ಟು ೧೫೬ ಕೃತಿಗಳಲ್ಲಿ ೧೩ ಕೃತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದರಲ್ಲಿ ಆಯ್ದ ಆರು ಕೃತಿಗಳ ಅಂತಿಮ ಪಟ್ಟಿಯನ್ನು ೨೦೧೫ರ ಸೆಪ್ಟೆಂಬರ್‌ನಲ್ಲಿ ಪ್ರಕಟಿಸುವರು.

೨೦೧೫ರ ಅಕ್ಟೋಬರ್ ೧೩ರಂದು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮವಾಗಿ ಘೋಷಿಸುವರು.

ಇದು ೨೦೧೫ರ ಮ್ಯಾನ್‌ಬುಕರ್ ಪ್ರಶಸ್ತಿಯ ರೂಪರೇಷೆಯಾಗಿದ್ದು ಭವ್ಯ ಭಾರತದ ಅನುರಾಧಾ ರಾಯ್ ಅವರಿಗೆ ಈ ಸಾರಿಯ ಪ್ರಶಸ್ತಿಯು ಲಭಿಸಲೆಂದು ನಾವು ನೀವು ಶುಭ ಕೋರೋಣವಲ್ಲವೇ?

ನನ್ನ ಮುದ್ದು ಪುಟಾಣಿಗಳೆ… ನೀವೆಲ್ಲ ಇಂದಿನಿಂದಲೇ ಮನಸ್ಸು ಮಾಡಿ! ನಾನೂ ಇಂಗ್ಲೀಷ್ ಸಾಹಿತ್ಯ ಅಭ್ಯಾಸ ಮಾಡಿ ಇಂಗ್ಲೀಷ್‌ನಲ್ಲಿ ಸಾಧನೆ ಮಾಡಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುತ್ತೇನೆಂಬ ಗುರಿ, ಹಠ, ಸಾಧನೆ ಹೊಂದುವಿರಲ್ಲವೇ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ