Home / ಲೇಖನ / ಇತರೆ / ಹೀಗಾದರೆ ಮುಂದಿನ ಗತಿ?

ಹೀಗಾದರೆ ಮುಂದಿನ ಗತಿ?

“ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಹೆಂಡತಿಗಿಂತಲೂ ಅಧಿಕವಾಗಿ ಪ್ರೀತಿಸುವರಿದ್ದಾರೆ.”

“ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಮಗು ಅಷ್ಟೇ ಏಕೆ ಪತಿರಾಯನಿಗಿಂತಲೂ ಹೆಚ್ಚು ಕಾಳಜಿ ಮಾಡುವ ಪ್ರೀತಿಸುವವರಿದ್ದಾರೆ.”

“ನನ್ನ ಆಪ್ತ ಸ್ನೇಹಿತರಿಗಿಂತಲೂ ಅಧಿಕವೆಂದು ನಾನು ಸ್ಮಾರ್‍ಟ್ ಫೋನನ್ನು ನಂಬಿದ್ದೇನೆ”- ಹೀಗಾದರೆ ಮುಂದಿನ ಗತಿ? ಬರುಬರುತ್ತಾ ಮಾನವೀಯ ಸಂಬಂಧಗಳ ಗತಿ ಏನು? ನಾವೆತ್ತ ಸಾಗಿದ್ದೇವೆ??

ಇತ್ತೀಚೆಗೆ ಜಾಗತಿಕ ಸಾರ್‍ವಜನಿಕ ಅಭಿಪ್ರಾಯ ಸಂಶೋಧನಾ ಸಲಹಾ ಸಮಿತಿ ಅಂತರ್‍ಜಾಲದ ಮೂಲಕ ಈ ಸಮೀಕ್ಷೆ ಕೈಗೊಂಡಿತ್ತು! ಆಗಸ್ಟ್ ೨೦೧೫ರಲ್ಲಿ ಮೊಟೊರೊಲಾ ಕಂಪನಿ ನಡೆಸಿದ ಈ ಸಮೀಕ್ಷೆಯಲ್ಲಿ ಸುಮಾರು ಏಳು ಸಾವಿರ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸಮಗ್ರ ಅಧ್ಯಯನವೊಂದನ್ನು ಸಿದ್ಧಗೊಳಿಸಿದೆ.

ಅದರ ಪ್ರಕಾರ ಭಾರತೀಯರು ಅನೇಕರು ಸ್ಮಾರ್‍ಟ್‌ಫೋನಿನಲ್ಲೇ ಮಗ್ನರಾಗುತ್ತಿದ್ದಾರೆನ್ನುವ ವಿಚಾರ ಒಂದೆಡೆಯಾದರೆ ಮತ್ತೊಂದೆಡೆ ಅದು ಕೆಲವರ ಹಾಸಿಗೆಯ ಸಂಗಾತಿಯೆಂದು ಹೇಳಿಕೊಂಡಿದ್ದಾರೆ!

ಹೌದು! ಇದು ತುಸು ಅತಿರೇಕವೆನಿಸಿದರೂ ನಿಜದ ಸಂಗತಿ ಎನ್ನುತ್ತಿದೆ ಇತ್ತೀಚೆಗೆ ಬಿಡುಗಡೆಯಾದ ಸೆವೆನ್ ಕಂಟ್ರಿ ಸಮೀಕ್ಷಾ ವರದಿ.

ಸ್ಮಾರ್‍ಟ್‌ಫೋನ್‌ನೊಂದಿಗೆ ಏಕಾಂತವಾಗಿ ಕಾಲ ಕಳೆಯಲು ಅನೇಕರು ತಮ್ಮ ತಂದೆತಾಯಿ, ಅಕ್ಕತಂಗಿ, ಹೆಂಡತಿ, ಮಕ್ಕಳನ್ನು ತಮ್ಮ ಗುರುಗಳನ್ನು ದೂರ ಮಾಡಿಕೊಳ್ಳಲು ಸಿದ್ಧರಾಗಿರುವರು!

ಶೇಕಡಾ ೬೦%ರಷ್ಟು ಜನರು ಸ್ಮಾರ್‍ಟ್‌ಫೋನ್ ಕೈಯಲ್ಲಿಡಿದು ಪಕ್ಕದಲ್ಲಿಟ್ಟುಕೊಂಡು ಮಲಗುವುದಾಗಿ ಹೇಳಿಕೊಂಡಿದ್ದಾರೆ.

ಸ್ನಾನ, ಊಟ, ತಿಂಡಿ ಮಾಡುವಾಗಲೂ ಫೋನ್ ಇರಬೇಕೆಂದೂ ಆರರಲ್ಲಿ ಒಬ್ಬರು ಸಾರಿಕೊಂಡಿದ್ದಾರೆ, ಎಂಥಾ ಅಪಾಯ ಸಂದರ್‍ಭಗಳಾದ ಡ್ರೈವಿಂಗ್, ಈಜು, ಸೈಕಲ್, ಆಟ ಇತ್ಯಾದಿ ವೇಳೆಯಲ್ಲಿ ನಮ್ಮ ಗಮನ ಫೋನ್ ಕಡೆಗೇ ಹೇಗುವುದೆಂದೂ ಶೇಕಡಾ ೫೪% ರಷ್ಟು ಜನರು ಸಾರಿರುವರು!

ಇನ್ನು ಶೇಕಡಾ ೪೦% ರಷ್ಟು ಜನರು ಕೆಲವು ರಹಸ್ಯಗಳು, ಅಂಕಿ‌ಅಂಶಗಳು, ಫೋಟೋಗಳು, ತಂತ್ರಕುತಂತ್ರ, ವೈಯಕ್ತಿಕ ತಾಣಗಳು ಅಲ್ಲಿವೆ. ಹೀಗಾಗಿ ಜೀವದ ಗೆಳೆಯನಿಗಿಂತಲೂ ಜೀವದ ಸ್ಮಾರ್‍ಟ್‌ಫೋನ್ ಮುಂದಿನ ಮಾಯಜಾಲವೆಂದು ಬಹಿರಂಗ ಪಡಿಸಿರುವರು.

ಭವ್ಯಭಾರತದ ಜನವೆಲ್ಲ ಹೀಗಾದರೆ ಮುಂದಿನ ಗತಿ…?!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...