Home / ಲೇಖನ / ಇತರೆ / ಲಡ್ಡಿನ ಮಹಿಮೆ

ಲಡ್ಡಿನ ಮಹಿಮೆ

ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ವಿತರಿಸುವ ಲಡ್ಡಿನ ಮಹಿಮೆ ಅಪಾರ. ನಾನು ೧೯೯೧ರಿಂದ ಈತನಕ ಹತ್ತಾರು ಸಲ ಹೋಗಿ ಬಂದಿದ್ದೇನೆ.

ಒಮ್ಮೆ- ಬರಿಗಾಲಲ್ಲಿ ಬೆಟ್ಟ ಹತ್ತಿ ಇಳಿದಿದ್ದುಂಟು. ಪ್ರಕೃತಿ ಸೌಂದರ್ಯ ಆಸ್ವಾದಿಸಿದ್ದುಂಟು.

ನನ್ನ ಕಣ್ಣ ಮುಂದೆ ನಿತ್ಯ ಸುತ್ತ ಸುಳಿಯುವುದೆಂದರೆ… ಇಲ್ಲಿನ ಲಡ್ಡು, ಈ ಲಡ್ಡಿನ ಮಹಿಮೆ ಅಪಾರ. ಒಮ್ಮೆ ತಿಂದರೆ ಇನ್ನೊಮ್ಮೆ, ಮತ್ತೊಮ್ಮೆ, ತಿನ್ನಬೇಕೆನಿಸುವುದು!

ವಿದೇಶಿಯರೂ ಇಲ್ಲಿಗೆ ಬಂದು ಹೋಗುವರು…

ನಾನು ಈ ಐದು ದಶಕಗಳಲ್ಲಿ ನೂರಾರು ಕಡೆಗಳಲ್ಲಿ ಲಡ್ಡು ಸವಿದಿದ್ದೇನೆ. ಆದರೆ ತಿರುಪತಿಯ ಲಡ್ಡು ಇದ್ದಂತೇ ಇಲ್ಲವೇ ಇಲ್ಲ! “ಇದೇಕೆ ಇಷ್ಟು ರುಚಿ ಶುಚಿ? ಈ ಲಡ್ಡಿನ ಮಹಿಮೆಯಾದರೂ ಏನು? ಇದರ ಹಿಂದಿರುವ ರಹಸ್ಯವಾದರೂ ಏನು? ಸ್ಥಳ ಮಹಿಮೆಯೇ? ಪಾಕ ಶಾಸ್ತ್ರವೇ?” ಅಧ್ಯಯನ ಯೋಗ್ಯವಾದ ವಸ್ತು ವಿಶೇಷವಾಗಿದೆ.

ಇಲ್ಲಿನ ಲಡ್ಡು ಆಕರ್‍ಷಣೆಯೇ ಸೋಜಿಗವೆನಿಸುವುದು. ಒಂದು ಲಡ್ಡು ಕೈಯಲ್ಲಿಡಿದರೆ ಕೈತುಂಬಾ ೩೦೦ ಗ್ರಾಂ ತೂಕದ್ದು! ಒಂದು ತಿನ್ನಲು ಮುಖ ಉಜ್ಜಿ… ಆಹಾ.. ಸಾಕುಸಾಕಾಗಿ ಬಿಡುವುದು. ಕೈಬಾಯೆಲ್ಲ ಸುವಾಸನೆ ಘಮ-ಘಮ ಪರಿಮಳ ಬೀರುವುದು! ಒಂದೇ ಸಾರಿ ಎರಡು ಲಡ್ಡುಗಳನ್ನು ಬಿಡದೆ ಪ್ರತಿ ಸಾರಿ ಸವಿದಿದ್ದೇನೆ. ಯಾವುದೇ ರೀತಿಯ ಅಡ್ಡ ಪರಿಣಾಮ ಕಂಡು ಬಂದಿಲ್ಲ! ಸಕ್ಕರೆ ರೋಗವನ್ನು ಹತೋಟಿಗೆ ತಂದಿದೆ. ರಕ್ತದೊತ್ತಡವನ್ನು ಸರಿದೂಗಿಸಿದೆ. ಹಸಿವು ಹೆಚ್ಚಿಸಿದೆ. ಉಲ್ಲಾಸ ಉತ್ಸಾಹ ಹೆಚ್ಚಿಸಿದೆ. ಇನ್ನೊಂದು ಲಡ್ಡು ತಿನ್ನಬೇಕೆಂಬಾಸೆ ಮೂಡಿದೆ.

ಲಡ್ಡಿನ ವಾಸನೆ ಕಿಲೋಮೀಟರ್‌ವರೆಗೂ ವ್ಯಾಪಿಸಿದೆ. ಅದರಲ್ಲಿ ರಾಶಿರಾಶಿ ಕಲ್ಲುಸಕ್ಕರೆ, ಬಾದಾಮಿ, ಉತ್ತೂತ್ತಿ, ದ್ರಾಕ್ಷಿ, ಗೋಡಂಬಿ, ಏಲಕ್ಕಿ, ಬೆಲ್ಲ, ತುಪ್ಪ, ಲವಂಗ ಒಣಕೊಬ್ಬರಿ.. ಗುಲ್ಕನ್… ಅಬ್ಬಾಬ್ಬಾ… ಏನೆಲ್ಲ ಹಾಕಿ ತಯಾರಿಸಿದ ಲಡ್ಡು ವಾರವಿಟ್ಟರೂ ಕೆಡದಂತೆ ಉಳಿಯುವ ಮಹಿಮೆ ಬಣ್ಣಿಸಲು ಅಸಾಧ್ಯ! ತಿನ್ನಬೇಕು ತಿಂದು ಅದರ ಸವಿ ಸವಿಯಬೇಕು. ಒಮ್ಮೆ ಶ್ರೀಮಹಾವಿಷ್ಣುವೇ ಭಕ್ತನ ವೇಷದಲ್ಲಿ ಬಂದು ಲಡ್ಡು ಸವಿದನೆಂಬ ಕಥೆಯೇ ಉಂಟು! ಅಷ್ಟು ವಿಶ್ವವಿಖ್ಯಾತಿ….

ಈ ಲಡ್ಡಿಗೊಂದು ಇತಿಹಾಸವಿದೆ. ಇದನ್ನು ಜನರಿಗೆ ಪ್ರಸಾದವಾಗಿ ದಿನಾಂಕ ೦೨-೦೮-೧೭೧೫ರಂದು ಆರಂಭಿಸಿದ್ದು ಈಗ ೩೦೦ ವರ್ಷಗಳ ಇತಿಹಾಸವನ್ನು ಸಾರುವುದು.

ಪ್ರತಿನಿತ್ಯ ೬೫೦ ಜನರು ೩೦೦ ಜನ ಪರಿಣಿತ ಅಡಿಗೆ ಭಟ್ಟರೂ ಸೇರಿ ಸುಮಾರು ೩ ಲಕ್ಷ ಲಡ್ಡುಗಳನ್ನು ತಯಾರಿಸುವರು. ೨೦೧೪ನೇ ಸಾಲಿನಲ್ಲಿ ೯೦ ದಶಲಕ್ಷ ಲಡ್ಡು ಖರ್‍ಚಾಗಿದೆ.

ಬ್ರಹೋತ್ಸವದ ಕಾಲದಲ್ಲಿ ೧.೮ ದಶಲಕ್ಷ ಲಡ್ಡುಗಳು ಖರ್‍ಚಾಗುತ್ತವೆ.

ಒಂದು ಲಡ್ಡುವಿಗೆ ೨೫ ರೂಪಾಯಿಗಳಷ್ಟು ಖರ್‍ಚು ಬರಬರುವುದು. ಆದರೆ ದೇವಸ್ಥಾನದ ಕಮಿಟಿಯವರು ಭಕ್ತ ಜನರಿಗೆ ರೂಪಾಯಿ ೧೦ರಂತೇ ಎರಡು ಲಡ್ಡು ನೀಡುತ್ತಿರುವರು.

೨೦೧೫-೧೬ನೆಯ ಸಾಲಿನಲ್ಲಿ ಬರೀ ಲಡ್ಡು ಮಾರಾಟದಿಂದಲೇ ೨೦೦ ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆಯಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...