Home / ಕವನ / ಕವಿತೆ / ಎಬ್ಬಿಸಮ್ಮ ತಾಯಿ

ಎಬ್ಬಿಸಮ್ಮ ತಾಯಿ

ಕರ್ನಾಟಕಾಂಬೆಯ ಕನ್ನಡ ಮಾತೆಯೆ
ಎಬ್ಬಿಸಮ್ಮ ತಾಯೆ ಎಬ್ಬೀಸೆ
ನಿನ್ನಯ ಮಕ್ಕಳನೆಬ್ಬೀಸೆ ಕನ್ನಡ ಕಂದರನೆಬ್ಬೀಸೆ

ಹಿಂದಿನ ಕವಿಗಳ ಹಿಂದಿನ ಸಿರಿಗಳ
ಬಾಯ್ತುಂಬ ಹೊಗಳುತ್ತ ಮಲಗಿಹರ
ಇಂದಿನ ಪರಿಗಳ ಮುಂದಿನ ಗುರಿಗಳ
ಕೈಯಿಂದ ಮಾಡದೆ ಕುಳಿತಿಹರ
ಪಂಪ ರನ್ನ ಕುಮಾರವ್ಯಾಸ ಹರಿಹರರೆಂದು
ಜಪಮಾಡಿ ಕುಳಿತರೆ ಬಂದಿತೇನು?
ನೂರಾರು ಪಂಪರು ರನ್ನರು ಬರುವಂತೆ
ಸಾಹಿತ್ಯ ಬಳ್ಳಿಯ ಹಬ್ಬಿಸಮ್ಮಾ ||೧||

ಬಸವಣ್ಣ ಅಲ್ಲಮ ಅಕ್ಕಮಹಾದೇವಿ
ಹೆಸರಾಗಿ ಕೇವಲ ಉಳಿದರೇಕೆ?
ಕನಕ ಪುರಂದರ ಸರ್ವಜ್ಞ ಸಂತರು
ಕನಸಿನ ಚಿತ್ರಗಳಾದರೇಕೆ?
ಪುಲಿಕೇಶಿ ಹೊಯ್ಸಳ ಕೃಷ್ಣ ಟಿಪ್ಪುವಿನ
ನೆಲದಲ್ಲಿ ಕಲಿತನ ಮಳುಗದಂತೆ
ಚೆನ್ನಮ್ಮ ಮಲ್ಲಮ್ಮ ಹೊನ್ನಮ್ಮರ ಮನೆಯಲ್ಲಿ
ಚಿನ್ನದ ಸ್ತ್ರೀಯರು‌ಅಳಿಯದಂತೆ ||೨||

ಹಳೆಬೀಡು ಬೇಲೂರು ಹಾಳಾದ ಹಂಪೀನ
ಗೊಮ್ಮಟ ಗುಮ್ಮಟ ನೋಡಿ ನೋಡಿ
ಮತ್ತೆ ಅಯ್ಯೋ ಆಹಾ ಎಂದರೆ ಬಂತೇ
ಕಲೆಯೆಲ್ಲ ಶಿಲೆಯಾಗಿ ಹೋಯಿತೇನು?
ರಾಜಕಾರಣದಿಸ್ಪೀಟಾಟದೆಲೆಗಳಾಗಿ
ನರಸತ್ತು ನರಳುವರನೆಬ್ಬಿಸಮ್ಮಾ
ಸಾಜ ಸ್ವಂತಿಕೆಯನ್ನು ಮರೆತ ಮಂದೆಗಳನ್ನು
ತಮ್ಮ ತಾವರಿವಂತೆ ಉಬ್ಬಿಸಮ್ಮಾ ||೩||

ಮ್ಮಸೂರಿನಾ ಬದಲು ಕರ್ನಾಟಕಾಯಿತು
ಮಾಸಿದ ಜನಮನ ತೊಳೆವರಾರು
ಒಳಗಿನಾತ್ಮವ ಬಿಟ್ಟು ಹೊದಿಕೆಯ ಹೆಸರಲ್ಲಿ
ನುಸುಳುವ ನುಸಿಗಳ ಕಳೆವರಾರು
ಹಳೆಯ ಜೀವಕೆ ಹೊಸ ಚೇತನ ನೀ ತುಂಬು
ಒಳಿತಾಗಿ ಬಾಳಲು ಹರಸು ತಾಯಿ
ಸಂಸ್ಕೃತಿ ಹಳತೀದೆ ಹೊಸ ನೀರು ಬರಲಮ್ಮ
ಸಿರಿಗನ್ನಡಂಗೆಲ್ಗೆ ಮೆರೆಸು ತಾಯಿ ||೪||
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...