ಎಬ್ಬಿಸಮ್ಮ ತಾಯಿ

ಕರ್ನಾಟಕಾಂಬೆಯ ಕನ್ನಡ ಮಾತೆಯೆ
ಎಬ್ಬಿಸಮ್ಮ ತಾಯೆ ಎಬ್ಬೀಸೆ
ನಿನ್ನಯ ಮಕ್ಕಳನೆಬ್ಬೀಸೆ ಕನ್ನಡ ಕಂದರನೆಬ್ಬೀಸೆ

ಹಿಂದಿನ ಕವಿಗಳ ಹಿಂದಿನ ಸಿರಿಗಳ
ಬಾಯ್ತುಂಬ ಹೊಗಳುತ್ತ ಮಲಗಿಹರ
ಇಂದಿನ ಪರಿಗಳ ಮುಂದಿನ ಗುರಿಗಳ
ಕೈಯಿಂದ ಮಾಡದೆ ಕುಳಿತಿಹರ
ಪಂಪ ರನ್ನ ಕುಮಾರವ್ಯಾಸ ಹರಿಹರರೆಂದು
ಜಪಮಾಡಿ ಕುಳಿತರೆ ಬಂದಿತೇನು?
ನೂರಾರು ಪಂಪರು ರನ್ನರು ಬರುವಂತೆ
ಸಾಹಿತ್ಯ ಬಳ್ಳಿಯ ಹಬ್ಬಿಸಮ್ಮಾ ||೧||

ಬಸವಣ್ಣ ಅಲ್ಲಮ ಅಕ್ಕಮಹಾದೇವಿ
ಹೆಸರಾಗಿ ಕೇವಲ ಉಳಿದರೇಕೆ?
ಕನಕ ಪುರಂದರ ಸರ್ವಜ್ಞ ಸಂತರು
ಕನಸಿನ ಚಿತ್ರಗಳಾದರೇಕೆ?
ಪುಲಿಕೇಶಿ ಹೊಯ್ಸಳ ಕೃಷ್ಣ ಟಿಪ್ಪುವಿನ
ನೆಲದಲ್ಲಿ ಕಲಿತನ ಮಳುಗದಂತೆ
ಚೆನ್ನಮ್ಮ ಮಲ್ಲಮ್ಮ ಹೊನ್ನಮ್ಮರ ಮನೆಯಲ್ಲಿ
ಚಿನ್ನದ ಸ್ತ್ರೀಯರು‌ಅಳಿಯದಂತೆ ||೨||

ಹಳೆಬೀಡು ಬೇಲೂರು ಹಾಳಾದ ಹಂಪೀನ
ಗೊಮ್ಮಟ ಗುಮ್ಮಟ ನೋಡಿ ನೋಡಿ
ಮತ್ತೆ ಅಯ್ಯೋ ಆಹಾ ಎಂದರೆ ಬಂತೇ
ಕಲೆಯೆಲ್ಲ ಶಿಲೆಯಾಗಿ ಹೋಯಿತೇನು?
ರಾಜಕಾರಣದಿಸ್ಪೀಟಾಟದೆಲೆಗಳಾಗಿ
ನರಸತ್ತು ನರಳುವರನೆಬ್ಬಿಸಮ್ಮಾ
ಸಾಜ ಸ್ವಂತಿಕೆಯನ್ನು ಮರೆತ ಮಂದೆಗಳನ್ನು
ತಮ್ಮ ತಾವರಿವಂತೆ ಉಬ್ಬಿಸಮ್ಮಾ ||೩||

ಮ್ಮಸೂರಿನಾ ಬದಲು ಕರ್ನಾಟಕಾಯಿತು
ಮಾಸಿದ ಜನಮನ ತೊಳೆವರಾರು
ಒಳಗಿನಾತ್ಮವ ಬಿಟ್ಟು ಹೊದಿಕೆಯ ಹೆಸರಲ್ಲಿ
ನುಸುಳುವ ನುಸಿಗಳ ಕಳೆವರಾರು
ಹಳೆಯ ಜೀವಕೆ ಹೊಸ ಚೇತನ ನೀ ತುಂಬು
ಒಳಿತಾಗಿ ಬಾಳಲು ಹರಸು ತಾಯಿ
ಸಂಸ್ಕೃತಿ ಹಳತೀದೆ ಹೊಸ ನೀರು ಬರಲಮ್ಮ
ಸಿರಿಗನ್ನಡಂಗೆಲ್ಗೆ ಮೆರೆಸು ತಾಯಿ ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೃಂದಗಾನ
Next post ಅವನು, ಅವಳು ಮತ್ತು ಬದುಕು

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys