Home / ಕಥೆ / ಕಿರು ಕಥೆ / ದೃಷ್ಟಿ ಇರೆ ದಾರಿ

ದೃಷ್ಟಿ ಇರೆ ದಾರಿ

ಸಂಚಾರದಲ್ಲಿದ್ದ ಒಬ್ಬ ಗುರು ಒಂದು ದೇವಾಲಯದಲ್ಲಿ ತಂಗಿದ್ದರು. ಅಲ್ಲಿಗೆ ಕೆಲವು ಶಿಷ್ಯರು ಬಂದರು.

“ಗುರುವೆ! ನಮಗೆ ದಾರಿ ತೋರಿಸಬೇಕೆಂದು” ಒಬ್ಬ ಶಿಷ್ಯ ಕೇಳಿದ.
“ನಿನ್ನ ಮುಂದಿರುವ ವೃಕ್ಷವೇ ನಿನ್ನ ದಾರಿ” ಎಂದರು ಗುರುಗಳು.
“ಅರ್ಥವಾಗಲಿಲ್ಲ ಗುರುಗಳೇ” ಎಂದು ಶಿಷ್ಯ ಪೆಚ್ಚು ಮೋರೆ ಹಾಕಿದ.
“ವೃಕ್ಷವನ್ನು ಸುತ್ತುವಾಗ ನಿನಗೆ ಸವೆಯದ ದಾರಿ ಇದೆ. ಮೇಲೆ ಶಾಕೆಗಳ ಅನೇಕ ಕವಲುಗಳ ದಾರಿಯಲ್ಲಿ ಹೂ, ಕಾಯಿ ಫಲ ದೊರೆಯದೆ ಇರದು” ಎಂದರು ಗುರುಗಳು.

ಅಂತರಾರ್‍ಥದ ಮರ್‍ಮವನ್ನು ಅರಿತ ಶಿಷ್ಯ ‘ಧನ್ಯೂಸ್ಮಿ’ ಎಂದ.

“ಅವನಿಗೆ ವೃಕ್ಷವು ದಾರಿಯಾದರೆ ನನಗೆ ಯಾವುದು ದಾರಿ?” ಎಂದ ಮತ್ತೊರ್‍ವ ಶಿಷ್ಯ.

“ನಿನ್ನ ಮುಂದಿರುವ ಸಾಗರವೇ ನಿನಗೆ ದಾರಿ, ನಡೆದು ಹೋಗು” ಎಂದರು ಗುರುಗಳು.

“ಸಾಗರದಲ್ಲಿ ದಾರಿ ಎಲ್ಲಿ? ಮುಳುಗಿಹೋಗುವೆನಲ್ಲ, ಗುರುಗಳೇ?” ಎಂದ ಎರಡನೇಯ ಶಿಷ್ಯ.

“ನಿನ್ನ ಹೃದಯ ಸಾಗರದಲ್ಲಿ ಮನವೆಂಬ ಹಡಗು ಅಲೆಗಳ ಆರ್‍ಭಟವ ಸಹಿಸಿ ತೇಲುತ್ತ ಹೋದರೆ ದಡದಲ್ಲಿ ಕಾಣದೇ ನಿನ್ನ ದಾರಿ?” ಎಂದರು ಗುರುಗಳು. ಶಿಷ್ಯ ತೃಪ್ತನಾಗಿ ಧ್ಯೇಯದತ್ತ ದಾರಿ ಹಿಡಿದು ಸಾಗಿದ.

ಮೂರನೆಯ ಶಿಷ್ಯ ಮತ್ತೆ ಮುಂದೆ ಬಂದು “ನನಗೇನು ದಾರಿ ಹೇಳಿಗುರುಗಳೆ?” ಎಂದಾಗ.

“ಅಯ್ಯೋ! ಮೂರ್‍ಖಾ, ದಾರಿ ನಮ್ಮ ಕಣ್ಣಿಗೆ ಕಾಣಬೇಕು, ದೃಷ್ಟಿಯಲ್ಲಿ ದಾರಿಯಲ್ಲವೆ? ನಮ್ಮ ಕಾಲು ನಡೆದರೆ, ದಾರಿ ಓಡಿ ಬರುತ್ತದೆ. ಎಲ್ಲರಿಗೂ ಒಂದೊಂದು ದಾರಿ ಕಾದಿರುತ್ತದೆ. ಅದು ಕಂಡು ಕೊಳ್ಳುವುದು ಬಾಳಿನ ಗುಟ್ಟು” ಎಂದಾಗ ಶಿಷ್ಯರ ಗುಂಪಿಗೆ ಸತ್ಯವು ಮನದಟ್ಟಾಯಿತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...