Home / ಕಥೆ / ಕಿರು ಕಥೆ / ದೃಷ್ಟಿ ಇರೆ ದಾರಿ

ದೃಷ್ಟಿ ಇರೆ ದಾರಿ

ಸಂಚಾರದಲ್ಲಿದ್ದ ಒಬ್ಬ ಗುರು ಒಂದು ದೇವಾಲಯದಲ್ಲಿ ತಂಗಿದ್ದರು. ಅಲ್ಲಿಗೆ ಕೆಲವು ಶಿಷ್ಯರು ಬಂದರು.

“ಗುರುವೆ! ನಮಗೆ ದಾರಿ ತೋರಿಸಬೇಕೆಂದು” ಒಬ್ಬ ಶಿಷ್ಯ ಕೇಳಿದ.
“ನಿನ್ನ ಮುಂದಿರುವ ವೃಕ್ಷವೇ ನಿನ್ನ ದಾರಿ” ಎಂದರು ಗುರುಗಳು.
“ಅರ್ಥವಾಗಲಿಲ್ಲ ಗುರುಗಳೇ” ಎಂದು ಶಿಷ್ಯ ಪೆಚ್ಚು ಮೋರೆ ಹಾಕಿದ.
“ವೃಕ್ಷವನ್ನು ಸುತ್ತುವಾಗ ನಿನಗೆ ಸವೆಯದ ದಾರಿ ಇದೆ. ಮೇಲೆ ಶಾಕೆಗಳ ಅನೇಕ ಕವಲುಗಳ ದಾರಿಯಲ್ಲಿ ಹೂ, ಕಾಯಿ ಫಲ ದೊರೆಯದೆ ಇರದು” ಎಂದರು ಗುರುಗಳು.

ಅಂತರಾರ್‍ಥದ ಮರ್‍ಮವನ್ನು ಅರಿತ ಶಿಷ್ಯ ‘ಧನ್ಯೂಸ್ಮಿ’ ಎಂದ.

“ಅವನಿಗೆ ವೃಕ್ಷವು ದಾರಿಯಾದರೆ ನನಗೆ ಯಾವುದು ದಾರಿ?” ಎಂದ ಮತ್ತೊರ್‍ವ ಶಿಷ್ಯ.

“ನಿನ್ನ ಮುಂದಿರುವ ಸಾಗರವೇ ನಿನಗೆ ದಾರಿ, ನಡೆದು ಹೋಗು” ಎಂದರು ಗುರುಗಳು.

“ಸಾಗರದಲ್ಲಿ ದಾರಿ ಎಲ್ಲಿ? ಮುಳುಗಿಹೋಗುವೆನಲ್ಲ, ಗುರುಗಳೇ?” ಎಂದ ಎರಡನೇಯ ಶಿಷ್ಯ.

“ನಿನ್ನ ಹೃದಯ ಸಾಗರದಲ್ಲಿ ಮನವೆಂಬ ಹಡಗು ಅಲೆಗಳ ಆರ್‍ಭಟವ ಸಹಿಸಿ ತೇಲುತ್ತ ಹೋದರೆ ದಡದಲ್ಲಿ ಕಾಣದೇ ನಿನ್ನ ದಾರಿ?” ಎಂದರು ಗುರುಗಳು. ಶಿಷ್ಯ ತೃಪ್ತನಾಗಿ ಧ್ಯೇಯದತ್ತ ದಾರಿ ಹಿಡಿದು ಸಾಗಿದ.

ಮೂರನೆಯ ಶಿಷ್ಯ ಮತ್ತೆ ಮುಂದೆ ಬಂದು “ನನಗೇನು ದಾರಿ ಹೇಳಿಗುರುಗಳೆ?” ಎಂದಾಗ.

“ಅಯ್ಯೋ! ಮೂರ್‍ಖಾ, ದಾರಿ ನಮ್ಮ ಕಣ್ಣಿಗೆ ಕಾಣಬೇಕು, ದೃಷ್ಟಿಯಲ್ಲಿ ದಾರಿಯಲ್ಲವೆ? ನಮ್ಮ ಕಾಲು ನಡೆದರೆ, ದಾರಿ ಓಡಿ ಬರುತ್ತದೆ. ಎಲ್ಲರಿಗೂ ಒಂದೊಂದು ದಾರಿ ಕಾದಿರುತ್ತದೆ. ಅದು ಕಂಡು ಕೊಳ್ಳುವುದು ಬಾಳಿನ ಗುಟ್ಟು” ಎಂದಾಗ ಶಿಷ್ಯರ ಗುಂಪಿಗೆ ಸತ್ಯವು ಮನದಟ್ಟಾಯಿತು.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...