Home / ಕಥೆ / ಕಿರು ಕಥೆ / ಸತ್ಯದ ವಿಳಾಸ

ಸತ್ಯದ ವಿಳಾಸ

ಒಮ್ಮೆ ಶಿಷ್ಯ ಗುರುಗಳಲ್ಲಿ ಬಂದು “ಸತ್ಯದ ವಿಳಾಸ ನಿಮಗೆ ಗೊತ್ತೇ?” ಎಂದ. “ನನಗೆ ಹಲವು ವಿಳಾಸಗಳು ಗೊತ್ತು, ಅದನ್ನು ಬೇಕಾದರೆ ಹೇಳುತ್ತೇನೆ. ಅದನ್ನು ಹಿಡಿದು ನೀ ಸತ್ಯವನ್ನು ಹುಡುಕು” ಎಂದರು ಗುರುಗಳು.

“ಹೇಳಿ ಗುರುಗಳೇ’ ಎಂದ ಶಿಷ್ಯ.

“ಎಲ್ಲಾ ಪರ್‍ವತಗಳನ್ನು ಹತ್ತುತ್ತ ಹೋಗು ಕೊನೆಗೆ ಒಂದು ಪರ್ವತದ ಶಿಖರದಲ್ಲಿ ನಕ್ಷತ್ರದ ಬೆಳಕಿನಲ್ಲಿ ಸತ್ಯದ ವಿಳಾಸ ಸಿಗುತ್ತದೆ.” ಎಂದರು ಗುರುಗಳು.

“ಇದು ಬಹಳ ಕಷ್ಟ ಗುರುಗಳೆ” ಎಂದ ಶಿಷ್ಯ.

“ಹಾಗಾದರೆ ಒಂದು ಕೆಲಸ ಮಾಡು. ಸಪ್ತ ಸಮುದ್ರವನ್ನು ದಾಟುವಾಗ ಬಹಳ ಜಾಗರೂಕತೆ ಇಂದ ಕಣ್ತೆರದು ನೋಡುತ್ತಿರು. ಅಲೆ ಅಲೆಗಳ ಲಿಪಿ ಕೊರತದಲ್ಲಿ ಸತ್ಯದ ಸ್ಪಷ್ಟ ವಿಳಾಸ ಸಿಗುತ್ತದೆ” ಎಂದರು ಗುರುಗಳು. “ಗುರುಗಳೇ! ಇದು ಬಹಳ ಕಷ್ಟ ಸಾಧ್ಯ” ಎಂದ ಶಿಷ್ಯ.

“ಹೋಗಲಿ ಬಿಡಪ್ಪಾ. ಒಂದು ಕೆಲಸ ಮಾಡು, ಹೂವು ಬಿರಿದ ಎಡೆಯಲೆಲ್ಲ ಹೋಗುವ ದುಂಬಿಯ ಹಿಂದೆ ನೀನು ಓಡುತ್ತಿರು. ದುಂಬಿ ಝೇಂಕಾರದಲ್ಲಿ ಸತ್ಯದ ವಿಳಾಸ ಹೇಳುತ್ತಿರುತ್ತದೆ. ಅದನ್ನು ಅರ್‍ಥವಿಸಿ ತಿಳಿದುಕೊ.”

“ಗುರುಗಳೇ! ಹೂವಿನಿಂದ ಹೂವಿಗೆ ಹಾರುವ ದುಂಬಿಯ ಹಿಂದೆ ಹಾರಾಡಲು ಸಾಧ್ಯವಿಲ್ಲ. ಏನಾದರು ಬೇರೆ ಸುಲಭೋಪಾಯವಿಲ್ಲವೆ, ಗುರುಗಳೇ?”. “ಸತ್ಯದ ವಿಳಾಸ
ಯಾವುದಾದರೂ ಓಣೀಲಿ ಸಿಕ್ಕೊಲ್ಲವೇ?” ಎಂದ.

ಅದಕ್ಕೆ ಗುರುಗಳೆಂದರು ನನಗೆ ಗೊತ್ತಿರುವ ಓಣಿ ಆಕಾಶದಲ್ಲಿ ಇದೆ. ಅದಕ್ಕೆ ನೀನು ಏಣಿ ಹತ್ತಿ ಹೋಗಬೇಕು. ಆಗಸದ ನೀಲಿ ಓಣಿಯ ಗೋಡೆಯ ಮೇಲೆ ಸತ್ಯದ ವಿಳಾಸ ಇರುತ್ತದೆ. ಆದರೆ ಮೋಡ ಮುಚ್ಚಿರುತ್ತದೆ. ಅದು ಮಳೆ ಬರೋತನಕ ಕಾಯಬೇಕು. ಮಿಂಚು ಬಂದಾಗ ಓದಿಕೋಬೇಕು” ಎಂದರು ಗುರುಗಳು.

“ಗುರುಗಳೇ! ನನಗೆ ಸತ್ಯದ ವಿಳಾಸವು ಬೇಡ, ನಿತ್ಯದ ವಿಳಾಸವೇ ಸಾಕು” ಎಂದು ನಮಸ್ಕರಿಸಿ ಶಿಷ್ಯ ಕಾಲು ಕಿತ್ತಿದ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...