Home / ಕಥೆ / ಕಿರು ಕಥೆ / ಸತ್ಯದ ವಿಳಾಸ

ಸತ್ಯದ ವಿಳಾಸ

ಒಮ್ಮೆ ಶಿಷ್ಯ ಗುರುಗಳಲ್ಲಿ ಬಂದು “ಸತ್ಯದ ವಿಳಾಸ ನಿಮಗೆ ಗೊತ್ತೇ?” ಎಂದ. “ನನಗೆ ಹಲವು ವಿಳಾಸಗಳು ಗೊತ್ತು, ಅದನ್ನು ಬೇಕಾದರೆ ಹೇಳುತ್ತೇನೆ. ಅದನ್ನು ಹಿಡಿದು ನೀ ಸತ್ಯವನ್ನು ಹುಡುಕು” ಎಂದರು ಗುರುಗಳು.

“ಹೇಳಿ ಗುರುಗಳೇ’ ಎಂದ ಶಿಷ್ಯ.

“ಎಲ್ಲಾ ಪರ್‍ವತಗಳನ್ನು ಹತ್ತುತ್ತ ಹೋಗು ಕೊನೆಗೆ ಒಂದು ಪರ್ವತದ ಶಿಖರದಲ್ಲಿ ನಕ್ಷತ್ರದ ಬೆಳಕಿನಲ್ಲಿ ಸತ್ಯದ ವಿಳಾಸ ಸಿಗುತ್ತದೆ.” ಎಂದರು ಗುರುಗಳು.

“ಇದು ಬಹಳ ಕಷ್ಟ ಗುರುಗಳೆ” ಎಂದ ಶಿಷ್ಯ.

“ಹಾಗಾದರೆ ಒಂದು ಕೆಲಸ ಮಾಡು. ಸಪ್ತ ಸಮುದ್ರವನ್ನು ದಾಟುವಾಗ ಬಹಳ ಜಾಗರೂಕತೆ ಇಂದ ಕಣ್ತೆರದು ನೋಡುತ್ತಿರು. ಅಲೆ ಅಲೆಗಳ ಲಿಪಿ ಕೊರತದಲ್ಲಿ ಸತ್ಯದ ಸ್ಪಷ್ಟ ವಿಳಾಸ ಸಿಗುತ್ತದೆ” ಎಂದರು ಗುರುಗಳು. “ಗುರುಗಳೇ! ಇದು ಬಹಳ ಕಷ್ಟ ಸಾಧ್ಯ” ಎಂದ ಶಿಷ್ಯ.

“ಹೋಗಲಿ ಬಿಡಪ್ಪಾ. ಒಂದು ಕೆಲಸ ಮಾಡು, ಹೂವು ಬಿರಿದ ಎಡೆಯಲೆಲ್ಲ ಹೋಗುವ ದುಂಬಿಯ ಹಿಂದೆ ನೀನು ಓಡುತ್ತಿರು. ದುಂಬಿ ಝೇಂಕಾರದಲ್ಲಿ ಸತ್ಯದ ವಿಳಾಸ ಹೇಳುತ್ತಿರುತ್ತದೆ. ಅದನ್ನು ಅರ್‍ಥವಿಸಿ ತಿಳಿದುಕೊ.”

“ಗುರುಗಳೇ! ಹೂವಿನಿಂದ ಹೂವಿಗೆ ಹಾರುವ ದುಂಬಿಯ ಹಿಂದೆ ಹಾರಾಡಲು ಸಾಧ್ಯವಿಲ್ಲ. ಏನಾದರು ಬೇರೆ ಸುಲಭೋಪಾಯವಿಲ್ಲವೆ, ಗುರುಗಳೇ?”. “ಸತ್ಯದ ವಿಳಾಸ
ಯಾವುದಾದರೂ ಓಣೀಲಿ ಸಿಕ್ಕೊಲ್ಲವೇ?” ಎಂದ.

ಅದಕ್ಕೆ ಗುರುಗಳೆಂದರು ನನಗೆ ಗೊತ್ತಿರುವ ಓಣಿ ಆಕಾಶದಲ್ಲಿ ಇದೆ. ಅದಕ್ಕೆ ನೀನು ಏಣಿ ಹತ್ತಿ ಹೋಗಬೇಕು. ಆಗಸದ ನೀಲಿ ಓಣಿಯ ಗೋಡೆಯ ಮೇಲೆ ಸತ್ಯದ ವಿಳಾಸ ಇರುತ್ತದೆ. ಆದರೆ ಮೋಡ ಮುಚ್ಚಿರುತ್ತದೆ. ಅದು ಮಳೆ ಬರೋತನಕ ಕಾಯಬೇಕು. ಮಿಂಚು ಬಂದಾಗ ಓದಿಕೋಬೇಕು” ಎಂದರು ಗುರುಗಳು.

“ಗುರುಗಳೇ! ನನಗೆ ಸತ್ಯದ ವಿಳಾಸವು ಬೇಡ, ನಿತ್ಯದ ವಿಳಾಸವೇ ಸಾಕು” ಎಂದು ನಮಸ್ಕರಿಸಿ ಶಿಷ್ಯ ಕಾಲು ಕಿತ್ತಿದ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...