Home / ಕವನ / ಅನುವಾದ / ನಾಟಕವೊಂದರ ಹಾಡುಗಳು – ೧

ನಾಟಕವೊಂದರ ಹಾಡುಗಳು – ೧

ಹಾಡು – ೧

ದಿಟ್ಟಿಸಿ ನೋಡುತಲಿದ್ದಳು ಕನ್ನಿಕೆ
ಡಯೋನಿಸಸ್ಸನು ಸತ್ತಾಗ,
ಅವನ ಮೈಯಿಂದ ಹೃದಯವ ಕಿತ್ತು
ಕೈಯೊಳು ಅದನ್ನು ಹಿಡಿದಾಗ,
ಹಾಡಿದರೆಲ್ಲಾ ಕಲಾದೇವಿಯರು
ಮಹಾಯುಗಾದಿಯ ಚೈತ್ರದಲಿ,
ದೇವರ ಸಾವೂ ಆಟ ಎಂಬಂತೆ
ಕೂಡಿ ಹಾಡಿದರು ಖುಷಿಯಲ್ಲಿ.

ಮೂಡಿ ಮುಳುಗುವುದು ಟ್ರಾಯ್ ಇನ್ನೊಮ್ಮೆ
ವೀರರುಣಿಸುವರು ನರಿಗಳಿಗೆ,
ಹೊನ್ನ ತುಪ್ಪಟಕ ಬಣ್ಣದ ಆರ್‍ಗೋ –
ದೋಣಿ ಹಾಯುವುವು ಸಾಗರಕೆ.
ರೋಮನ್ ರಾಜ್ಯ ಸ್ತಂಭಿತವಾಯಿತು
ಶಾಂತಿಯುದ್ಧ ಸೂತ್ರವ ಒಗೆದು,
ಮೂಲತಮದಿಂದ ಉಗ್ರಕನ್ನಿಕೆಯ
ಜೊತೆಗೇ ಚಿಕ್ಕೆಯು ಮೂಡಿರಲು
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಪೂರ್‍ಣವಾಗಿ ತಿಳಿಯದಾಗಲೂ ನಮ್ಮನ್ನು ಸೆಳೆಯಬಲ್ಲ ನಿಗೂಢ ಮೋಹಕತೆ ಈ ಹಾಡುಗಳಲ್ಲಿದೆ. ಈ ಎರಡು ಹಾಡುಗಳನ್ನು ಏಟ್ಸನ ‘ರಿಸರೆಕ್ಷನ್’ ಎಂಬ ನಾಟಕದಿಂದ
ಆರಿಸಲಾಗಿದೆ.
(೧) ದಿಟ್ಟಿಸಿ ನೋಡುವ ಕನ್ನಿಕೆ ಗ್ರೀಕ್‌ ದೇವತೆ ಅಥೀನಾ.
(೨) ಡಯೋನಿಸಸ್ ಮರ್‍ತ್ಯಾಮರ್‍ತ್ಯ ಶಕ್ತಿಗಳ ಮಿಲನದಿಂದ ಬಂದವನು. ಇವನ ತಂದೆ ದೇವತೆಗಳ ಒಡೆಯ ಸ್ಯೂಸ್, ತಾಯಿ ಮರ್‍ತ್ಯಳಾದ ಪರ್‍ಸೆಫೋನ್. ಸ್ಯೂಸನ ಹಿರಿಯ ಪತ್ನಿಯಾದ ಹೀರಾಳನ್ನು ಮೆಚ್ಚಿಸಲು ಶತ್ರುಗಳು ಅವನನ್ನು ಕತ್ತರಿಸಿ ಹಾಕುತ್ತಾರೆ. ಅಥೀನಾ ಡಯೋನಿಸಸ್ಸಿನ ಹೃದಯವನ್ನು ಅವರಿಂದ ಕಸಿದು ತಂದು ಸ್ಯೂಸನಿಗೆ ಕೊಡುತ್ತಾಳೆ, ಸ್ಯೂಸ್ ಅದನ್ನು ನುಂಗಿ ಪುನಃ ಅವನನ್ನು ಇಡಿಯಾಗಿ ಪಡೆಯುತ್ತಾನೆ. ಡಯೋನಿಸಸ್ ಋತುಶಕ್ತಿಯನ್ನು ಪ್ರತಿನಿಧಿಸುವ ದೇವತೆ. ಅವನ ಹುಟ್ಟು ಸಾವುಗಳೆರಡೂ ಋತುಚಕ್ರದ ಆರಂಭಕ್ಕೆ ಅಗತ್ಯವಾದವು. ಅವನು ಸತ್ತರೂ ಮತ್ತೆ ಹುಟ್ಟುತ್ತಾನೆನ್ನುವುದು ಗೊತ್ತಿರುವುದರಿಂದ ಕಲಾದೇವಿಯರು ಸಂತೋಷಚಿತ್ತರಾಗಿ ಹಾಡುತ್ತಾರೆ.
(೮-೧೨) ಹಿಂದೆ ನಡೆದ ಟ್ರೋಜನ್ ಯುದ್ಧ ಮತ್ತೆ ನಡೆಯುತ್ತದೆ. ಆರ್‍ಗೋದೋಣಿ= ಗ್ರೀಕ್‌ ದೋಣಿ, ಉಗ್ರಕನ್ನಿಕೆ ಮತ್ತು ಚಿಹ್ನೆಗಳು ಮೇರಿ ಹಾಗೂ ಕ್ರಿಸ್ತನನ್ನು ಸೂಚಿಸುತ್ತವೆ.

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...