Home / ಕವನ / ಅನುವಾದ / ನಾಟಕವೊಂದರ ಹಾಡುಗಳು – ೨

ನಾಟಕವೊಂದರ ಹಾಡುಗಳು – ೨

ಮಾನವನ ಮಂಕುಗವಿಸುವ ಯೋಚನೆಗೆ ಮರುಗಿ
ಹೊರಹರಿದನವನು ಅಂತರವ ಕ್ಷಮಿಸಿ,
ಗೆಲಿಲಿಯನ್ ಗಲಭೆ ಗೊಂದಲಗಳಲ್ಲಿ;
ಬ್ಯಾಬಿಲೋನಿನ ನಕ್ಷತ್ರಪ್ರಭೆ ಸೃಷ್ಟಿಸಿತು
ಆಕಾರವಿರದ ಕಲ್ಪಕ ಕತ್ತಲನ್ನು;
ಸತ್ತ ಕ್ರಿಸ್ತನ ನೆತ್ತರಿನ ಕಂಪು ಕೊಚ್ಚಿತು
ಎಲ್ಲ ದೈವಿಕ ಸಹನಶೀಲತೆಯನು
ವ್ಯರ್‍ಥಗೊಳಿಸಿತು ಡೋರಿಕ್ ಶಿಸ್ತುಗಳನು.

ಹಿರಿದೆಂದು ಮಾನವನು ಭಾವಿಸಿದ್ದೆಲ್ಲ
ಉಳಿವುದೊಂದೇ ಹಗಲು ಅಥವ ಗಳಿಗೆ;
ಪ್ರೇಮ ನೀಡುವ ಸೌಖ್ಯ ಪ್ರೇಮವನೆ ತಿನ್ನುವುದು,
ಕುಂಚವೇ ಚಿತ್ರಕನ ಕನಸುಗಳನು,
ವಂದಿಘೋಷಣೆ ಅವನ ವೈಭವವ ಮುಗಿಸುವುದು,
ಸೈನಿಕನ ನಡೆ ಅವನ ಶಕ್ತಿಯನ್ನು;
ಇರುಳಲ್ಲಿ ಜ್ವಾಲೆಯಾಡುವುದೆಲ್ಲ ಬೆಳೆದದ್ದು
ಹೀರಿ ಮಾನವ ಹೃದಯಸಾರವನ್ನು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

(೪) ಬ್ಯಾಬಿಲೋನಿನ ಜ್ಯೋತಿಶ್ಯಾಸ್ತ್ರ
(೫) ‘ಆಕಾರವಿಲ್ಲದ ಕಲ್ಪಕ ಕತ್ತಲು’ ಕ್ರಿಶ್ಚಿಯನ್ ಧರ್‍ಮವನ್ನು ಸೂಚಿಸುತ್ತದೆ. ಅದನ್ನು ಹಾಗೆ ಬಣ್ಣಿಸಿದವನು ಪ್ರೊಕ್ಲಸ್ ಎಂಬ ದಾರ್‍ಶನಿಕ. ಇವನು ನವ ಪ್ಲೆಟಾನಿಕ್ ಪಂಥದವನು.
ಡೋರಿಕ್ ಶಿಸ್ತು – ಗ್ರೀಕರ ಶಿಸ್ತು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...