Home / ಕವನ / ಅನುವಾದ / ನಾಟಕವೊಂದರ ಹಾಡುಗಳು – ೨

ನಾಟಕವೊಂದರ ಹಾಡುಗಳು – ೨

ಮಾನವನ ಮಂಕುಗವಿಸುವ ಯೋಚನೆಗೆ ಮರುಗಿ
ಹೊರಹರಿದನವನು ಅಂತರವ ಕ್ಷಮಿಸಿ,
ಗೆಲಿಲಿಯನ್ ಗಲಭೆ ಗೊಂದಲಗಳಲ್ಲಿ;
ಬ್ಯಾಬಿಲೋನಿನ ನಕ್ಷತ್ರಪ್ರಭೆ ಸೃಷ್ಟಿಸಿತು
ಆಕಾರವಿರದ ಕಲ್ಪಕ ಕತ್ತಲನ್ನು;
ಸತ್ತ ಕ್ರಿಸ್ತನ ನೆತ್ತರಿನ ಕಂಪು ಕೊಚ್ಚಿತು
ಎಲ್ಲ ದೈವಿಕ ಸಹನಶೀಲತೆಯನು
ವ್ಯರ್‍ಥಗೊಳಿಸಿತು ಡೋರಿಕ್ ಶಿಸ್ತುಗಳನು.

ಹಿರಿದೆಂದು ಮಾನವನು ಭಾವಿಸಿದ್ದೆಲ್ಲ
ಉಳಿವುದೊಂದೇ ಹಗಲು ಅಥವ ಗಳಿಗೆ;
ಪ್ರೇಮ ನೀಡುವ ಸೌಖ್ಯ ಪ್ರೇಮವನೆ ತಿನ್ನುವುದು,
ಕುಂಚವೇ ಚಿತ್ರಕನ ಕನಸುಗಳನು,
ವಂದಿಘೋಷಣೆ ಅವನ ವೈಭವವ ಮುಗಿಸುವುದು,
ಸೈನಿಕನ ನಡೆ ಅವನ ಶಕ್ತಿಯನ್ನು;
ಇರುಳಲ್ಲಿ ಜ್ವಾಲೆಯಾಡುವುದೆಲ್ಲ ಬೆಳೆದದ್ದು
ಹೀರಿ ಮಾನವ ಹೃದಯಸಾರವನ್ನು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

(೪) ಬ್ಯಾಬಿಲೋನಿನ ಜ್ಯೋತಿಶ್ಯಾಸ್ತ್ರ
(೫) ‘ಆಕಾರವಿಲ್ಲದ ಕಲ್ಪಕ ಕತ್ತಲು’ ಕ್ರಿಶ್ಚಿಯನ್ ಧರ್‍ಮವನ್ನು ಸೂಚಿಸುತ್ತದೆ. ಅದನ್ನು ಹಾಗೆ ಬಣ್ಣಿಸಿದವನು ಪ್ರೊಕ್ಲಸ್ ಎಂಬ ದಾರ್‍ಶನಿಕ. ಇವನು ನವ ಪ್ಲೆಟಾನಿಕ್ ಪಂಥದವನು.
ಡೋರಿಕ್ ಶಿಸ್ತು – ಗ್ರೀಕರ ಶಿಸ್ತು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...