ನಾಟಕವೊಂದರ ಹಾಡುಗಳು – ೨

ಮಾನವನ ಮಂಕುಗವಿಸುವ ಯೋಚನೆಗೆ ಮರುಗಿ
ಹೊರಹರಿದನವನು ಅಂತರವ ಕ್ಷಮಿಸಿ,
ಗೆಲಿಲಿಯನ್ ಗಲಭೆ ಗೊಂದಲಗಳಲ್ಲಿ;
ಬ್ಯಾಬಿಲೋನಿನ ನಕ್ಷತ್ರಪ್ರಭೆ ಸೃಷ್ಟಿಸಿತು
ಆಕಾರವಿರದ ಕಲ್ಪಕ ಕತ್ತಲನ್ನು;
ಸತ್ತ ಕ್ರಿಸ್ತನ ನೆತ್ತರಿನ ಕಂಪು ಕೊಚ್ಚಿತು
ಎಲ್ಲ ದೈವಿಕ ಸಹನಶೀಲತೆಯನು
ವ್ಯರ್‍ಥಗೊಳಿಸಿತು ಡೋರಿಕ್ ಶಿಸ್ತುಗಳನು.

ಹಿರಿದೆಂದು ಮಾನವನು ಭಾವಿಸಿದ್ದೆಲ್ಲ
ಉಳಿವುದೊಂದೇ ಹಗಲು ಅಥವ ಗಳಿಗೆ;
ಪ್ರೇಮ ನೀಡುವ ಸೌಖ್ಯ ಪ್ರೇಮವನೆ ತಿನ್ನುವುದು,
ಕುಂಚವೇ ಚಿತ್ರಕನ ಕನಸುಗಳನು,
ವಂದಿಘೋಷಣೆ ಅವನ ವೈಭವವ ಮುಗಿಸುವುದು,
ಸೈನಿಕನ ನಡೆ ಅವನ ಶಕ್ತಿಯನ್ನು;
ಇರುಳಲ್ಲಿ ಜ್ವಾಲೆಯಾಡುವುದೆಲ್ಲ ಬೆಳೆದದ್ದು
ಹೀರಿ ಮಾನವ ಹೃದಯಸಾರವನ್ನು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

(೪) ಬ್ಯಾಬಿಲೋನಿನ ಜ್ಯೋತಿಶ್ಯಾಸ್ತ್ರ
(೫) ‘ಆಕಾರವಿಲ್ಲದ ಕಲ್ಪಕ ಕತ್ತಲು’ ಕ್ರಿಶ್ಚಿಯನ್ ಧರ್‍ಮವನ್ನು ಸೂಚಿಸುತ್ತದೆ. ಅದನ್ನು ಹಾಗೆ ಬಣ್ಣಿಸಿದವನು ಪ್ರೊಕ್ಲಸ್ ಎಂಬ ದಾರ್‍ಶನಿಕ. ಇವನು ನವ ಪ್ಲೆಟಾನಿಕ್ ಪಂಥದವನು.
ಡೋರಿಕ್ ಶಿಸ್ತು – ಗ್ರೀಕರ ಶಿಸ್ತು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡುತಾವ ನೆನಪುಗಳು – ೭
Next post ಮೈಸೂರ ಮಲ್ಲಿಗೆ

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…