Home / ಕವನ / ಅನುವಾದ / ನಾಟಕವೊಂದರ ಹಾಡುಗಳು – ೨

ನಾಟಕವೊಂದರ ಹಾಡುಗಳು – ೨

ಮಾನವನ ಮಂಕುಗವಿಸುವ ಯೋಚನೆಗೆ ಮರುಗಿ
ಹೊರಹರಿದನವನು ಅಂತರವ ಕ್ಷಮಿಸಿ,
ಗೆಲಿಲಿಯನ್ ಗಲಭೆ ಗೊಂದಲಗಳಲ್ಲಿ;
ಬ್ಯಾಬಿಲೋನಿನ ನಕ್ಷತ್ರಪ್ರಭೆ ಸೃಷ್ಟಿಸಿತು
ಆಕಾರವಿರದ ಕಲ್ಪಕ ಕತ್ತಲನ್ನು;
ಸತ್ತ ಕ್ರಿಸ್ತನ ನೆತ್ತರಿನ ಕಂಪು ಕೊಚ್ಚಿತು
ಎಲ್ಲ ದೈವಿಕ ಸಹನಶೀಲತೆಯನು
ವ್ಯರ್‍ಥಗೊಳಿಸಿತು ಡೋರಿಕ್ ಶಿಸ್ತುಗಳನು.

ಹಿರಿದೆಂದು ಮಾನವನು ಭಾವಿಸಿದ್ದೆಲ್ಲ
ಉಳಿವುದೊಂದೇ ಹಗಲು ಅಥವ ಗಳಿಗೆ;
ಪ್ರೇಮ ನೀಡುವ ಸೌಖ್ಯ ಪ್ರೇಮವನೆ ತಿನ್ನುವುದು,
ಕುಂಚವೇ ಚಿತ್ರಕನ ಕನಸುಗಳನು,
ವಂದಿಘೋಷಣೆ ಅವನ ವೈಭವವ ಮುಗಿಸುವುದು,
ಸೈನಿಕನ ನಡೆ ಅವನ ಶಕ್ತಿಯನ್ನು;
ಇರುಳಲ್ಲಿ ಜ್ವಾಲೆಯಾಡುವುದೆಲ್ಲ ಬೆಳೆದದ್ದು
ಹೀರಿ ಮಾನವ ಹೃದಯಸಾರವನ್ನು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

(೪) ಬ್ಯಾಬಿಲೋನಿನ ಜ್ಯೋತಿಶ್ಯಾಸ್ತ್ರ
(೫) ‘ಆಕಾರವಿಲ್ಲದ ಕಲ್ಪಕ ಕತ್ತಲು’ ಕ್ರಿಶ್ಚಿಯನ್ ಧರ್‍ಮವನ್ನು ಸೂಚಿಸುತ್ತದೆ. ಅದನ್ನು ಹಾಗೆ ಬಣ್ಣಿಸಿದವನು ಪ್ರೊಕ್ಲಸ್ ಎಂಬ ದಾರ್‍ಶನಿಕ. ಇವನು ನವ ಪ್ಲೆಟಾನಿಕ್ ಪಂಥದವನು.
ಡೋರಿಕ್ ಶಿಸ್ತು – ಗ್ರೀಕರ ಶಿಸ್ತು

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...