Home / ಕವನ / ಅನುವಾದ / ಲೀಡಾ ಮತ್ತು ಹಂಸ

ಲೀಡಾ ಮತ್ತು ಹಂಸ

ಹಠಾತ್ತನೆರಗಿತು ಹಕ್ಕಿ; ಬಲಿಷ್ಠ ರೆಕ್ಕೆಯ ಬಿಚ್ಚಿ
ಬಡಿವ ಪಟಪಟಸದ್ದು. ಬೆಚ್ಚಿದ ಹುಡುಗಿಯನ್ನ
ಕೊಕ್ಕಿಂದ ಹಿಡಿದೆತ್ತಿ, ಮುದ್ದಿಸಿತು ಅಸಹಾಯ ಎದೆಗೆ ಎದೆಯನೊತ್ತಿ
ಸವರುತ್ತ ಅವಳ ತೊಡೆಬೆತ್ತಲೆಯ ಕಪ್ಪಾದ ಜಾಲಪಾದ.

ಗರಿತೆರೆದ ಇಂಥ ಅದ್ಭುತವ ಸಡಲುತ್ತಿರುವ
ತೊಡೆಯಿಂದ ಹೊರಗೆ ತಳ್ಳುವುದು ಹೇಗೆ ?
ಹಂಸತೂಲದ ತೆಕ್ಕೆಯೊಳಗೆ ಸಿಕ್ಕಿರುವ ಮೈ
ಮಿಡಿಯದಿರುವುದು ಹೇಗೆ ಬೆರಗುಕವಿಸಿದ ಎದೆಯ ಬಡಿತಗಳಿಗೆ ?

ತೊಡೆ ಕಂಪಿಸಿದ ಗಳಿಗೆ ಸೃಷ್ಟಿಯಾಯಿತೊ ಹೇಗೆ
ಬಿರಿಬಿಟ್ಟ ಗೋಡೆ, ಉರಿಬಿದ್ದ ಛಾವಣಿ, ಕೋಟೆ,
ಬಲಿಹೋದ ರಾಜ ಅಗಮೆಮ್ನನ್?
ಕಾವು ತೀರಿದ ಹಕ್ಕಿಕೊಕ್ಕು ಕಳಚುವ ಮುಂಚೆ,
ದಿವದ ಪಶುಬಿಗಿತಕ್ಕೆ ಒಳಪಟ್ಟ ಕ್ಷಣದಲ್ಲೆ,
ದತ್ತವಾಯಿತೊ ಹೇಗೆ ಶಕ್ತಿ ಜೊತೆ ಜ್ಞಾನವೂ ಶುಕ್ತಿಯೊಳಗೆ?
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಸ್ಯೂಸ್ (ಗ್ರೀಕ್ ಪುರಾಣದ ಪ್ರಕಾರ) ದೇವತೆಗಳ ರಾಜ. ಅವನು ಹಂಸದ ರೂಪದಲ್ಲಿ ಬಂದು ಮರ್‍ತ್ಯಕನ್ನಿಕೆಯಾದ ಲೀಡಾಳ ಮೇಲೆ ಎರಗಿ ಅವಳನ್ನು ಬಲಾತ್ಕಾರವಾಗಿ ಭೋಗಿಸುತ್ತಾನೆ. ಈ ಕೂಟದಿಂದ, ಹುಟ್ಟಿದ ಇಬ್ಬರು ಹೆಣ್ಣುಮಕ್ಕಳು ಹೆಲೆನ್ ಮತ್ತು ಕ್ಲೈಟಮ್ನೆಸ್ಟ್ರಾ. ಹೆಲೆನ್ ಗಂಡನನ್ನು ಬಿಟ್ಟು ಪ್ಯಾರಿಸ್ ಜೊತೆ ಟ್ರಾಯ್‌ಗೆ ಓಡಿಹೋಗುತ್ತಾಳೆ. ಅವಳ ಸಲುವಾಗಿ ಗ್ರೀಕ್ ಮತ್ತು ಟ್ರೋಜನ್ನರ ನಡುವೆ ಘೋರಯುದ್ಧ ನಡೆದು ಟ್ರಾಯ್‌ನಗರ ಉರಿದುಹೋಗುತ್ತದೆ. ಕ್ಲೈಟಮ್ನೆಸ್ಟ್ರಾ ಗಂಡನಾದ ಅಗ್‌ಮಮ್ನನ್ ಯುದ್ಧಕ್ಕೆ ಹೋದಾಗ ಬೇರೆ ಸಂಬಂಧ ಬೆಳೆಸಿ, ಗಂಡ ಹಿಂತಿರುಗಿ ಬಂದಾಗ ಮೋಸದಿಂದ ಕೊಲ್ಲಿಸುತ್ತಾಳೆ. ದೇವಮೂಲದ್ದೇ ಆದರೂ ಸ್ಯೂಸನ ಕಾಮ ಪರಾಪೇಕ್ಷೆಯನ್ನು ಲೆಕ್ಕಿಸದ್ದು; ಹಿಂಸಾತ್ಮಕವಾದದ್ದು; ಕೇವಲ ಸ್ವಾರ್ಥನಿಷ್ಠವಾದದ್ದು. ಧರ್‍ಮವಿರುದ್ಧವಾದ ಇಂಥ ಕಾಮದಿಂದ ಜನಿಸಿದ ಸಂತಾನ ಲೋಕಮಾರಕವಾದ ಹೊಸ ಅನಾಹುತಗಳಿಗೆ ದಾರಿಮಾಡಿದ್ದನ್ನು ಕವನ ಸೂಚಿಸುವಂತಿದೆ. ಏಟ್ಸನ ಚಿತ್ರಕಶಕ್ತಿಗೆ ಸೊಗಸಾದ ನಿದರ್‍ಶನ ಈ ಪದ್ಯ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...