ಹಿತ್ತಲ ತುಳಸಿ

ನೋಟವನು ರಂಜಿಸಳು. ಬಗೆಬಗೆಯ ಹೂವಿಲ್ಲ
ಬಣ್ಣದಾಟವ ಹೂಡಲೆನೆ. ಹಚ್ಚಹಸಿರಿರುವ
ಸೀರೆಕುಪ್ಪಸ ತೊಟ್ಟು ಮಂದಗತಿಯಿಂದಿರುವ
ಪಲ್ಲವಾಂಗಿಯು ಇವಳು. ಭೃಂಗ-ಕೇಲಿಯದಿಲ್ಲ
ಇವಳ ಬಳಿಯಲಿ ಇವಳ ಹುಬ್ಬು ತಿಳಿಯದು ಬಿಲ್ಲ
ಮಣಿತವನು, ಕಾಮಕಸ್ತೂರಿಯಾ ತೆನೆಗಿರುವ
ಕಂಪಿಲ್ಲ. ಹಳ್ಳಿ ಹಳ್ಳಿಗಳಲ್ಲಿ ಬೆಳೆದಿರುವ
ಹುಡಿಗೆಯಾಗಿಹಳಿವಳು ನಾಗರಿಕತೆಯೆ ಇಲ್ಲ!

ಇರಲೇನು? ಮನವಂದು ತುಳಸಿಯನ್ನು ವರಿಸಿದನು
ವಿಷ್ಣು ಸಾಕ್ಷಾತ್ ತಾನು! ಧಾರ್‍ಮಿಕರು ನುಗ್ಗಿದರು
ತಾಯಡಿಗೆ ತಲೆಯಿಡಲು, ಸನ್ನಿಧಿಯ ಹರಸಿದನು,-
ಒಸಗೆಯಿವಳಿಂದೆಂದು ವಿಜ್ಞಾನಿ ಹಿಗ್ಗಿದನು.
ಸ್ತ್ರೀಗಣದ ದೇವಿಯನು ನುಡಿಯುವರೆ ಮೂದಲಿಸಿ?
ಅಹುದೆ ತುಳಸೀದೇವಿ ಬರಿಯ ಹಿತ್ತಲ ತುಳಸಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನೆ ಪಾರ್‍ವತಿ ನಾನೆ ಗಿರಿಜೆ
Next post ಕಾಡುತಾವ ನೆನಪುಗಳು – ೭

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…