ಪ್ರಕೃತಿ-ವಿಕೃತಿ

ಬಾಲ್ಯದ ಬರಿಮೈ ತಿರುಗಾಟ
ಬೆಳೆದಂತೆಲ್ಲಾ ನಾಚಿಕೆ ಇಷ್ಟಿಷ್ಟೆ ಮೈಮುಚ್ಚಿತು
ಮೀಸಲ ಸೊಬಗು ನೋಡಿದವರು ಹಾಡಿದರು
ಆಗ ಹರಿದದ್ದೆಲ್ಲಾ ಸಿದ್ಧ ರಸ-ತರುವೆಲ್ಲ ಕಲ್ಪತರು
ದನವೆಲ್ಲಾ ಕಾಮಧೇನು ಇತ್ಯಾದಿ ಇತ್ಯಾದಿ
ಮೈತುಂಬ ಮರ್ಯಾದೆಯುಟ್ಟು
ಪ್ರಸನ್ನತೆ ಮುಡಿದು ಸೊಬಗ ತೊಟ್ಟು
ಮೇಲೊಂದು ದಿಟ್ಟಿ ಬೊಟ್ಟಿಟ್ಟು ನೀನಿದ್ದೆ
ಆ ಮಡಿಲ ಶಾಂತಿ
ನೆನಪಿನ ಹಾಳೆಗಳಲ್ಲಿಂದೂ ಹಚ್ಚಿಹಸಿರು
ಈಗಾದರೋ
ಸಂಶೋಧನೆಯ ಕತ್ತಿ
ಸೀರೆಯನಿಷ್ಟಿಷ್ಟೆ ಕಿತ್ತಿ
ಸುಧಾರಣೆಯ ಬೀದಿಯಲ್ಲೊಬ್ಬ ಬಜಾರಿ ಮೆರೆಯುತ್ತಾಳೆ
ಬಯಲಾದ ನಾಚಿಕೆಯ ಸೀಮೆ ಬಾಯ್ಬಿಟ್ಟ ನೆಲ
ಬಂಜೆಯಾದ ಕಾಮಧೇನು
ಕೀವುಗಾಯಗಳ ರಣರಂಗ
ನುಸಿ ಹತ್ತಿದ ಕಳೆ
ಅರಿಷ್ಟವಾದ ಪ್ರೇತ ನರ್ತನ
ಇದು ನಿನ್ನಲ್ಲಾದ ಪರಿವರ್ತನ
*****.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾತ್ರಿರಾಜ
Next post ಬಗೆ ಬಗೆ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys