ಸೌಂದರ್‍ಯಾರಾಧಕ

ಏಳೇಳು ಚಲುವತಿಯೆ! ನಿನಗಾಗಿ ತವಕಿಸುತ
ನಿಂತಿಹರು ಯೋಗಿಗಳು, ಪಂಧವನೆ ತೊಟ್ಟಿಹರು
ಕವಿವರರು ನಿನ್ನ ನೋಡುವದೆಂದು, ಬಿಟ್ಟಿಹರು
ದೆಸೆದೆಸೆಗೆ ಬೆಳಕಿನಂಬುಗಳನ್ನು ಚದರಿಸುತ
ಕತ್ತಲೆಯನರಸಿಗರು ತಾರೆಗಳು ಚಮಕಿಸುವ
ತಮ್ಮ ಕಿರುವೆರಳನ್ನು, ನಲಿಯುವವು. ಮೆಟ್ಟಿಹರು
ಪಾಮರರು ಸಲ್ಲದಾಸೆಯ, ಬೀಡುಬಿಟ್ಟಹರು
ಮುಗಿಲಮಂಡಲದಾಚೆ ಕನಸಿಗರು ರೋಧಿಸುತ.

ನಿನ್ನ ಬರವಿಂದೆನ್ನ ಹೃದಯಮಂದಿರವು ಸಹ
ವಿಮಲವಿರಬಹುದೆಂದು ಕಾಯುವೆನು. ಎಲೆ ಚೆಲುವೆ!
ಇರಬಹುದು ಕೆಲವರೊರೆವಂತೆ ನೀ ಬರಿ ಕನಸು.
ನಿತ್ಯಳೆಂದುಸಿರುತಿರು; ಅಡಗಲೆನ್ನಯ ದಾಹ
ನಾನು ಜೀವಿಸುವನಕ ಇಂತೆಸಗು; ಮರು ಕ್ಷಣವೆ
ನೀನಿಹುದು ಶುದ್ಧ ಸುಳ್ಳೆಂದು ಡಂಗುರ ಹೊಯಿಸು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿಲುಮೆ @ ೧೪
Next post ಕಾಡುತಾವ ನೆನಪುಗಳು – ೧೩

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…