Home / ಕವನ / ಕವಿತೆ / ಪ್ರಾರ್ಥನೆ

ಪ್ರಾರ್ಥನೆ

ಜಾಳು ಬೀಳಾಗಿ ಹಳೆನಾತ ಹೊಡೆಯುವೀ ಅಷಡ್ಡಾಳ ಬಟ್ಟೆಗಳ
ಕಿತ್ತೊಗೆದು ಮೈಗೊಪ್ಪವಾಗೊಪ್ಪುವಂಗಿಗಳ ತೊಡಿಸೋ
ಮರಗಟ್ಟದ ತೊಗಲುಗಳಲ್ಲಿ ಸಂವೇದನೆಯ ಮೊಳೆಸಿ
ರೋಮಾಂಚನವ ಚಿಗುರಿಸಿ
ರಂದ್ರರಂದ್ರವ ಬಯಲಗಾಳಿಗೆ ತೆರೆಸೋ
ನೀಲಿಗಟ್ಟಿರುವೀ ಧಮನಿಗಳಲ್ಲಿ
ಕೆಚ್ಚು ರೊಚ್ಚಿನ ಕೆಂಪು ಹರಿಸೋ
ಒಣಗಿ ಬೆಂಡಾಗಿ ಕಳಚಿ ಕುಸಿಯಲನುವಾಗಿರುವಸ್ಥಿ ಪಂಜರದ
ಮೂಲೆ ಮೂಳೆಗಳನ್ನುಕ್ಕುಗೊಳಿಸಿ ಸ್ಥಿರಗೊಳಿಸೋ
ಅಷ್ಟಾವಕ್ರವಾಗಿ ಅಂಕು ಡೊಂಕಾಗಿ ತುಂಡು ತುಂಡಾಗಿ
ಮಬ್ಬು ಮುಚ್ಚಿದೀ ನೋಟಗಳ
ರವಿಕಿರಣದಂತೆ ಸಹಜ ನೇರಗೊಳಿಸಿ ತೇಜಗೊಳಿಸೋ
ಓರೆ ಕೋರೆಗಳನೊಳವೊಗುವಂತೆ ಚೂಪುಗೊಳಿಸೋ
ಜಡತೆ ಜಿದ್ದು ಪಾಚಿಗಟ್ಟಿ
ಕೂಪಸ್ಥ ಬಂಡೆಯಾದ ಈ ಮಂಡೆಗೊಳಗಳ
ತಿಳಿಗೊಳಿಸೂ ಅರಳಿಸೂ ಸಹಸ್ರದಳದರವಿಂದದಂತೆ
ಭಾವದೊರತೆ ಬತ್ತಿ ಬರಡಾದೀ ಹಳ್ಳಗಳಲಿ
ದೇವರಸ ಗಂಗೆಯನುಕ್ಕಿಸಿ
ನಂದನವನವನರಳಿಸಿ ಹಿಗ್ಗಿಸೋ
ಹೊಂಡ ಹೊಂಡಗಳಲ್ಲಿ ಬಿದ್ದು
ತುಂಡು ತುಂಡು ತಿಂಡಿಗೂ ಭಂಟಾಡವಾಡುವೀ
ಕಪ್ಪೆ ಮೀನುಗಳನೆತ್ತೆತ್ತಿ
ವಿಶಾಲಸಾಗರದಲಿಳಿಸಿ ಬಾಳಿಸೊ
ಬೆದರು ಗೊಂಬೆಗಳೀ ಕಿವುಚು ಮೊಗವಾಡಗಳ ಕಳಚಿ
ಸೂರ್ಯ ಬಿಂಬಗಳ ನೈಜ ನಗೆಯ ತುಳುಕಿಸೋ
ಹರಿ ಹರಿದು ಕಚ್ಚಾಡಿ ಹೋರುವೀ ನಾಯಿಹದ್ದುಗಳ
ಉಗುರು ಹಲ್ಲುಗಳ ಕಿತ್ತು
ಸಹಜೀವನಕೆ ಸಾಧುಗೊಳಿಸೋ
ಕೊಳೆತು ನಾರುವೀ ತಿಪ್ಪೆ ಮನಗಳ
ಗುಡಿಸಿ ಸಾರಿಸೀ ಹಸನುಗೊಳಿಸೋ
ತಿಂದು ಮಲಗಿ ಓಡಾಡುವೀ ಬೆಂತರಗಳಲಿ
ಚೇತನದುಸಿರಾಡಿಸೋ
ನೂತನ ಹಸಿರು ಹೂ ಹಣ್ಣು ಕೊಡುವ
ಚಿರಂತನ ಸಿರಿ ಮೂಡಿಸೋ
ಬಿದ್ದವರ ಮಲಗಿರುವವರ
ಮತ್ತೆ ಮತ್ತೆ ಮರೆವಿಗೆ ಸಂದು ಸುಂದಾಗುವವರ
ಕತ್ತಲು ಒತ್ತೆಗೊಂಡವರ ಮಿತ್ತು ತುತ್ತುಗೊಳ್ಳುವವರ
ಎಬ್ಬಿಸೋ ತಂದೆ ಮೇಲೆಬ್ಬಿಸೋ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...