ಆದರ್‍ಶವಾದಿ

‘ನಿನಗೀಗ ಬರಿ ಐದು-ಇಪ್ಪತ್ತು ಬೆಳೆದಿಂತು
ಬಹಳ ಎತ್ತರವಾದೆ’ ಯೆಂದು ನುಡಿವಳು ತಾಯಿ.
‘ನಿಂತೆಹೆವು ದಡದಲ್ಲಿ; ನಿನ್ನ ಹಡಗದ ಹಾಯಿ
ಮುಂದೊಯ್ಯುತಿದೆ ನಿನ್ನ’ : ಸಖರೊರೆವರೊಲವಾಂತು
ಎಳೆಯರೆಲ್ಲರು ಕೂಡಿ, ‘ನೀನು ನೋಂಪಿಯನೋಂತು
ನಡೆವ ಬಗೆಯನ್ನರುಹು. ತೊದಲು ನುಡಿಯುವ ಬಾಯಿ
ಪ್ರೌಢಿಮೆಯ ಪಡೆವುದೆಂದೊ’ರೆದು ಮನವನು ತೋಯಿ-
ಸುವರು ಆನಂದದಲಿ ನಾನು ಚಿಕ್ಕವನೆಂತು,

ಮತ್ತೆ ದೊಡ್ಡವನೆಂತೊ, ನಾನರಿಯೆ! ನೆಲದಷ್ಟು,
ಮುಗಿಲಷ್ಟು ವರುಷಗಳು ನನ್ನ ಮಾಸಿಹನೆಂದು
ಜೀವ ನುಡಿವುದು ನಿತ್ಯ. ದಿಟವೆ ತಾಯಿಯ ಎಣಿಕೆ?
ಗಣಿತ ತಪ್ಪಿರಬೇಕು ನಿರ್‍ಧರಿಪ ಬಗೆಯೆಂತು,
ಜೀವಾತ್ಮ ಪ್ರಾಚೀನನಿರೆ ಕಾಲನಿರುವಷ್ಟು?
ಒಂದಣುವಿನಂತರವು ವಾರ್‍ಧಕ್ಯ- ಯೌವ್ವನಕೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಂಜುನಾಥನೆ ಬಂದನು

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…