Home / ಕವನ / ಕವಿತೆ / ಅವತಾರಿ ಬರುತ್ತಾನೆ

ಅವತಾರಿ ಬರುತ್ತಾನೆ

ಅವನು ಬರುತ್ತಾನೆ
ಮಾತುಗಳ ಮಾಲೆಹಾಕಿಕೊಂಡು ಮೌನದ ಬೇಲಿ ಸುತ್ತಿಕೊಂಡು
ತನ್ನ ಪರಾಕು ಪಂಪ ತಾನೇ ಒತ್ತಿಕೊಳ್ಳುತ್ತ ಅಥವಾ ಒತ್ತಿಸಿಕೊಳ್ಳುತ್ತ
ತಲೆ ನಿಗುರಿಸಿ ಎದೆ ಉಬ್ಬಿಸಿ ಬಿಮ್ಮನೆ ಬೀಗಿ ಬರುತ್ತಾನೆ
ಮಾತಿನ ಹೊಳೆಯಲ್ಲಿ ಮಂತ್ರ ಮಹಾರಾಜರ ತೇಲಿಸಿ ಮುಳುಗಿಸುತ್ತ
ಬಾಯ ಒರಳಲ್ಲಿ ಹಿರಿಯರನರೆದಾಡುತ್ತ

ಹಲ್ಲ ತೀಟೆಯಲ್ಲಿ ಕಿರಿಯರ ಕೊರೆದು ಸಣ್ಣ ಮಾಡುತ್ತ
ಮೂಗಿನ ನೇರಕ್ಕೆ ಜಗವನಳೆದು ಸೀನಿ ಸುರಿಯುತ್ತ
ಬಡಾಯಿ ಬಾಹುಗಳ ಉದ್ದಗಲಗಳಿಗೆ ಚಾಚಿ ತಬ್ಬಿ
ಹೂಟ್ಟೆಯುಬ್ಬರ ತೋರುತ್ತ ತನ್ನಪ್ಪನೊಬ್ಬನೇ ಪರಮ ಪುರುಷ
ತನ್ನವಗವಳೊಬ್ಬಳೇ ಜಗಮೀರಿದ ಗರತಿ ಎನುತ್ತ

ತನ್ನ ವಂಶ ವೃಕ್ಷಕ್ಕೆ ಅನಾದಿ ಬೀಜದ ಪಾವಿತ್ರ್ಯ ತೋರುತ್ತ
ಹಗಲಿನ ಮುಖಕ್ಕೆ ಕೊಳ್ಳಿ ತೋರಿಸುತ್ತ
ವಿಶ್ವಗೂಢತೆಯ ರೋಮರೋಮಗಳಲ್ಲಿ ತುಂಬಿಕೊಂಡು
ತಾನು ಕುಡಿದೊಂದೆರಡು ಬಾವಿಗಳಲ್ಲಿ ಸಾಗರಗಳ ಮುಕ್ಕಳಿಸುತ್ತ
ತನ್ನ ಬಾಯಲ್ಲೀರೇಳು ಲೋಕಗಳ ಬಿಂಬಿಸಿ
ಕೃಪಾಪೋಷಕ ನಗೆಯಿಂದ ಜಗವ ಪಾವನಗೊಳಿಸಿ

ನಮ್ಮನು ಉದ್ಧರಿಸುಲು ಬರುತ್ತಾನೆ
ಬಂದು ನಿಂತು ಜಗದಗಲ ಮುಗಿಲಗಲವಾದ
ತನ್ನುದರದಡಿಯಲ್ಲಿ ನಮಗೆ ಕಾವು ಕೊಡುತ್ತಾನೆ
ಬೆಚ್ಚಗಿದೆಯೆಂದು ನಾವು ಆಶ್ರಯ ಪಡೆದೆವೋ ಸರಿ
ಕಪ್ಪ ನೆರಳಪುಟ್ಟಿ ನಮ್ಮ ಮುಚ್ಚಿ
ಉಸಿರುಕಟ್ಟಿ ನಾವು ಮೂಕರಾಗಿ
ಬಿಳಿಚಿಕೊಂಡು ಬೆಪ್ಪರಾದರೆ ಅವನ ತಪ್ಪೇ?

ನೋಡು ಅವನು ಬಂದೇ ಬರುತ್ತಾನೆ
ಬಿಡಿಸಿಕೊಳ್ಳಲು ನೀನು ಯತ್ನಿಸಿದಂತೆಲ್ಲಾ
ಪರಲೋಕಕೇರುವ ಪರಿಪೂರ್ಣ ಪವಾಡದೇಣಿಯಿಂದಾದರೂ
ನಿನ್ನ ಸೆಳೆದು ತನ್ನ ಸುತ್ತಲೇ ಜೇಡನಂತೆ ತಿರುಗಾಡಿಸುತ್ತಾ
ಕೊನೆಗೆ ನಿನ್ನ ನುಂಗಿ ನೀರು ಕುಡಿಯುತ್ತಾನೆ
ಸೋಹಮ್ಮೆಂದು ನಿನ್ನ ಸೊನ್ನೆಯಾಗಿಸುತ್ತಾನೆ
ನೀನು ನೀನಾಗುಳಿಯಬೇಕೆಂದರೆ ದೂರ ಓಡು
ಅಗೋ ಬಂದ! ಬಂದೇ ಬರುತ್ತಾನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...