Home / ಕವನ / ಕವಿತೆ / ಮೈಸೂರ ಮಲ್ಲಿಗೆ

ಮೈಸೂರ ಮಲ್ಲಿಗೆ

ಮೈಸೂರ ಮಲ್ಲಿಗೆಯಾ
ಮುಡಿದು ಕಣ್ಸನ್ನೆಯಾ
ನೋಟದಲಿ ಪಿಸು ಮಾತಿನಾ
ಮೋಡಿಯಲಿ ಚಲುವ ರಾಶಿಯ
ಬೀರುತ ಮನ ಸೆಳೆದಾ ನಲ್ಲೆಽಽಽಽ
ಕಾದಿರಲು ನಲ್ಲನಿಗಾಗಿ
ಬೆಳದಿಂಗಳು ಮೂಡಿತು
ಹೊನ್ನ ಮಳೆ ಸುರಿಯಿತು
ಗರಿಗೆದರಿ ಕುಣಿದಾ ನವಿಲು
ಅವಳ ನೋಟಕ್ಕೆ ನಾಚಿತ್ತುಽಽಽಽ

ಹೆಣ್ಣು-
ಬೆಳದಿಂಗಳ ಬಾಳ ಹುಣ್ಣಿಮೆಯ
ಮೂಡುವಾಸೆಯಲಿ ತುಂತುರು ತುಂತುರು
ಮಳೆಹನಿಯಲಿ ತನನತಾನನ
ಧರೆಯು ತಣಿಯಿತು ನನ್ನ ಮನದಿ
ನಿನ್ನ ಗಾನಮೌನವಾಗಿ ವಿರಹಿಸಿತು

ಮೂಡಿದಾ ಮಲ್ಲಿಗೆ ದಳಗಳಲಿ
ನಿನ್ನ ನಗೆಯ ಬಿಂಬವನಿರಿಸಿ
ಸುಮವಾಗಿ ಅರಳಿ ದುಂಬಿಯಾಗಿ
ಬಾರದಿರುವೆ ಏಕೋ ನಾ ಕಾಣೆನೆ

ಬಾಳ ದೀವಿಗೆಯ ಜ್ಯೋತಿಯಾಗಿಹೆ
ಮನವ ತುಂಬಿದೆ ಜೊತೆಯಾಗಿ
ನಲಿವ ಆಸೆಯಲಿ ನಿನ್ನ ಕಾಣುವ
ಬಯಕೆ ಹೊಮ್ಮಿದೆ ಏಕೋನಾ ಕಾಣೆನೆ

ತಾಯೆ ಚಾಮುಂಡಿಯೆ ನಮಿಸಿ
ಬೇಡುವೆ ನಲ್ಲ ನಿಲ್ಲದ ಬಾಳು
ಚೆಂದವೇನೆ ಹರಸು ತಾಯೆ
ಕರ ಮುಗಿಯುವೆ ವರುಷಗಳು ಉರುಳಿ
ಹರುಷ ತರಲಿ ನನ್ನ ಬಾಳಲ್ಲಿ

ಗಂಡು-
ನಮ್ಮೂರ ಸೌಧದಲಿ
ನಿಮ್ಮೂರ ಮಂಟಪದಲಿ
ತುಂಬು ತೊಟ್ಟಿಲ ತೂಗೆ
ಬೆಳದಿಂಗಳ ಬಾಲೆಯೆ
ಹಸಿರುಟ್ಟ ಸಿರಿದೇವಿ
ಮಡಿಲ ಮೈ ಸೂರ ಸೊಬಗಲ್ಲಿ
ಪ್ರೇಮದರಸಿಯೆ
ಇಂಚರದಿ ರಸದೌತಣ ನೀಡೆ
ನನ್ನ ನಲ್ಲೆಽಽಽಽ

ಜೊತೆಗೂಡಿ ಹೋಗೋಣ ತಾಯ
ಪಾದಕೆ ಎರೆಗೊಣ ಹಕ್ಕಿಗಳಾಗಿ
ಬಾನಂಚಲಿ ಸೇರೋಣ ನಲಿಯೋಣ
ನನ್ನ ನಲ್ಲೆಽಽಽಽ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...