ಕಲಿಸಿದರು

ರೆಕ್ಕೆ ಬಲಿಯುವ ಮೊದಲೇ ಕತ್ತರಿಸಿ ಉಗುರು ಕೊಯ್ದು
ಕೊಕ್ಕ ಬಂಡೆಗೆ ಕುಕ್ಕಿಸಿ ಮೊಂಡಾಗಿಸಿ ಹೀಗೆ
ಬೆಳೆಸಿ ಬಿಟ್ಟರು-ಬೆಳೆಯ ಬಿಟ್ಟರು
ಕಣ್ಣು ಕಟ್ಟಿ ಕಾರಡವಿಯಲ್ಲಟ್ಟಿ ಬಿಟ್ಟರು

ಹೂಮಾಂಸವನರಳಿಸಿಕೋ ಎಂದು ಹದ್ದುಗಳಿಗಿಟ್ಟರು
ಹುಲ್ಲಂತೆ ಬಾಗೆಂದು ಬೆನ್ನ ಬಿಲ್ಲಾಗಿಸಿದರು
ಮಲ್ಲಿಗೆಯಾಗೆಂದು ಕಲ್ಲ ಕೆಳಗಪ್ಪಚ್ಚಿಗಿಕ್ಕಿದರು
ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯೊಡ್ಡೆಂದು
ಮೀಸೆ ಹೊತ್ತ ಮುಖಕ್ಕೆ ಮಸಿ ಹಚ್ಚಿದರು
ವಿಷವಿಕ್ಕಿದವಗೆ ಷಡ್ರಸವನಿಕ್ಕೆಂದು ಮನೆಹಾಳತನವ ಬೋಧಿಸಿದರು
ಒದೆಸಿಕೊಂಡರೂ ಅಳುನುಂಗಿ ನಗು ಎಂದು
ಅಳುಬುರುಕುತನವ ಕಲಿಸಿದರು

ಉಗುಳಿದರೆ ಒರೆಸಿಕೊಂಡು ಹೊಗಳೆಂದು
ಬೊಗಳುಸನ್ನಿತನವ ಕಲಿಸಿದರು
ಕೋಡಿದ್ದರೂ ತಿವಿಯದೆ ತಲೆಹಾಕುವುದ ಕಲಿಸಿದರು
ಗಂಡ ಬೇರನ್ನು ಕೊಟ್ಟು ಕಸಿ ಮಾಡಿ
ನರಹಿಚುಕಿ ಜೀವಧಾತು ಹರಿಯದೆ ಬರಲಾಗಿಸಿ
ಕೆಂಡ ಕೆರಳದಂತೆ ತಣ್ಣೀರು ಹಾಕಿ
ಷಂಡತನವ ಕಲಿಸಿದರು ನಮ್ಮವರು

ತಲೆ ಪಂಜರಪಕ್ಷಿಗೆ ಗಿಳಿಯೋದಿಸಿ
ಮೂಗುಹಿಡಿಸಿ ಜಪ ಮಾಡ ಕಲಿಸಿದರು
ತೀರ್ಥಕುಡಿಸಿ ಮಬ್ಬೇರಿಸಿ ಗೂಡಿನಲ್ಲಿಹಪರವೆಂದು ಕೂಡಿಹಾಕಿ
ಬಯಲಾಗಸದ ತಿಳಿಹೊಳೆಯ ಗಿರಿನೀರ ತನಿವಣ್ಣ ರಸಗಳಿಗೆಲ್ಲ
ಎರವಾಗಿಸಿ ಬಂದೋಬಸ್ತಾಗಿ ಬಂಧಿಸಿದರೋ ನಾಗರಿಕ ನೆರಳಲ್ಲಿ
ಕತ್ತಿಕೋಲು ಕುಣಿದಾಡುವ ಗೊಂಡಾರಣ್ಯದಲ್ಲಿ
ಮುಳ್ಳುಗಳೆದ್ದೆದ್ದು ಕಣ್ಣು ಚುಚ್ಚುವಲ್ಲಿ
ಕೋರೆ ಹಲ್ಲುಗಳು ಮಸೆಯುವಲ್ಲಿ ಕೆನ್ನಾಲಿಗೆ ಚಾಚಿದಲ್ಲಿ
ಕಲ್ಲು ಗುಂಡು ಸದಾ ಸುರಿಯುವಲ್ಲಿ
ಬೋಳಾಗಿಸಿ ಬಿಳಿಚು ಮಲ್ಲಿಗೆಯಾಗಿಸಿ
ಬಾಳಾ ಬಾಳೆಂದು ಕಲಿಸಿಬಿಟ್ಟರು ನಮ್ಮವರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬದುಕಿಗಾಗಿ…
Next post ಪುರುಷೋತ್ತಮ’ ಯಶವಂತ ಚಿತ್ತಾಲ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys