Home / ಕವನ / ಕವಿತೆ / ಕಲಿಸಿದರು

ಕಲಿಸಿದರು

ರೆಕ್ಕೆ ಬಲಿಯುವ ಮೊದಲೇ ಕತ್ತರಿಸಿ ಉಗುರು ಕೊಯ್ದು
ಕೊಕ್ಕ ಬಂಡೆಗೆ ಕುಕ್ಕಿಸಿ ಮೊಂಡಾಗಿಸಿ ಹೀಗೆ
ಬೆಳೆಸಿ ಬಿಟ್ಟರು-ಬೆಳೆಯ ಬಿಟ್ಟರು
ಕಣ್ಣು ಕಟ್ಟಿ ಕಾರಡವಿಯಲ್ಲಟ್ಟಿ ಬಿಟ್ಟರು

ಹೂಮಾಂಸವನರಳಿಸಿಕೋ ಎಂದು ಹದ್ದುಗಳಿಗಿಟ್ಟರು
ಹುಲ್ಲಂತೆ ಬಾಗೆಂದು ಬೆನ್ನ ಬಿಲ್ಲಾಗಿಸಿದರು
ಮಲ್ಲಿಗೆಯಾಗೆಂದು ಕಲ್ಲ ಕೆಳಗಪ್ಪಚ್ಚಿಗಿಕ್ಕಿದರು
ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯೊಡ್ಡೆಂದು
ಮೀಸೆ ಹೊತ್ತ ಮುಖಕ್ಕೆ ಮಸಿ ಹಚ್ಚಿದರು
ವಿಷವಿಕ್ಕಿದವಗೆ ಷಡ್ರಸವನಿಕ್ಕೆಂದು ಮನೆಹಾಳತನವ ಬೋಧಿಸಿದರು
ಒದೆಸಿಕೊಂಡರೂ ಅಳುನುಂಗಿ ನಗು ಎಂದು
ಅಳುಬುರುಕುತನವ ಕಲಿಸಿದರು

ಉಗುಳಿದರೆ ಒರೆಸಿಕೊಂಡು ಹೊಗಳೆಂದು
ಬೊಗಳುಸನ್ನಿತನವ ಕಲಿಸಿದರು
ಕೋಡಿದ್ದರೂ ತಿವಿಯದೆ ತಲೆಹಾಕುವುದ ಕಲಿಸಿದರು
ಗಂಡ ಬೇರನ್ನು ಕೊಟ್ಟು ಕಸಿ ಮಾಡಿ
ನರಹಿಚುಕಿ ಜೀವಧಾತು ಹರಿಯದೆ ಬರಲಾಗಿಸಿ
ಕೆಂಡ ಕೆರಳದಂತೆ ತಣ್ಣೀರು ಹಾಕಿ
ಷಂಡತನವ ಕಲಿಸಿದರು ನಮ್ಮವರು

ತಲೆ ಪಂಜರಪಕ್ಷಿಗೆ ಗಿಳಿಯೋದಿಸಿ
ಮೂಗುಹಿಡಿಸಿ ಜಪ ಮಾಡ ಕಲಿಸಿದರು
ತೀರ್ಥಕುಡಿಸಿ ಮಬ್ಬೇರಿಸಿ ಗೂಡಿನಲ್ಲಿಹಪರವೆಂದು ಕೂಡಿಹಾಕಿ
ಬಯಲಾಗಸದ ತಿಳಿಹೊಳೆಯ ಗಿರಿನೀರ ತನಿವಣ್ಣ ರಸಗಳಿಗೆಲ್ಲ
ಎರವಾಗಿಸಿ ಬಂದೋಬಸ್ತಾಗಿ ಬಂಧಿಸಿದರೋ ನಾಗರಿಕ ನೆರಳಲ್ಲಿ
ಕತ್ತಿಕೋಲು ಕುಣಿದಾಡುವ ಗೊಂಡಾರಣ್ಯದಲ್ಲಿ
ಮುಳ್ಳುಗಳೆದ್ದೆದ್ದು ಕಣ್ಣು ಚುಚ್ಚುವಲ್ಲಿ
ಕೋರೆ ಹಲ್ಲುಗಳು ಮಸೆಯುವಲ್ಲಿ ಕೆನ್ನಾಲಿಗೆ ಚಾಚಿದಲ್ಲಿ
ಕಲ್ಲು ಗುಂಡು ಸದಾ ಸುರಿಯುವಲ್ಲಿ
ಬೋಳಾಗಿಸಿ ಬಿಳಿಚು ಮಲ್ಲಿಗೆಯಾಗಿಸಿ
ಬಾಳಾ ಬಾಳೆಂದು ಕಲಿಸಿಬಿಟ್ಟರು ನಮ್ಮವರು
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...