Home / ಕವನ / ಕವಿತೆ / ಕಲಿಸಿದರು

ಕಲಿಸಿದರು

ರೆಕ್ಕೆ ಬಲಿಯುವ ಮೊದಲೇ ಕತ್ತರಿಸಿ ಉಗುರು ಕೊಯ್ದು
ಕೊಕ್ಕ ಬಂಡೆಗೆ ಕುಕ್ಕಿಸಿ ಮೊಂಡಾಗಿಸಿ ಹೀಗೆ
ಬೆಳೆಸಿ ಬಿಟ್ಟರು-ಬೆಳೆಯ ಬಿಟ್ಟರು
ಕಣ್ಣು ಕಟ್ಟಿ ಕಾರಡವಿಯಲ್ಲಟ್ಟಿ ಬಿಟ್ಟರು

ಹೂಮಾಂಸವನರಳಿಸಿಕೋ ಎಂದು ಹದ್ದುಗಳಿಗಿಟ್ಟರು
ಹುಲ್ಲಂತೆ ಬಾಗೆಂದು ಬೆನ್ನ ಬಿಲ್ಲಾಗಿಸಿದರು
ಮಲ್ಲಿಗೆಯಾಗೆಂದು ಕಲ್ಲ ಕೆಳಗಪ್ಪಚ್ಚಿಗಿಕ್ಕಿದರು
ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯೊಡ್ಡೆಂದು
ಮೀಸೆ ಹೊತ್ತ ಮುಖಕ್ಕೆ ಮಸಿ ಹಚ್ಚಿದರು
ವಿಷವಿಕ್ಕಿದವಗೆ ಷಡ್ರಸವನಿಕ್ಕೆಂದು ಮನೆಹಾಳತನವ ಬೋಧಿಸಿದರು
ಒದೆಸಿಕೊಂಡರೂ ಅಳುನುಂಗಿ ನಗು ಎಂದು
ಅಳುಬುರುಕುತನವ ಕಲಿಸಿದರು

ಉಗುಳಿದರೆ ಒರೆಸಿಕೊಂಡು ಹೊಗಳೆಂದು
ಬೊಗಳುಸನ್ನಿತನವ ಕಲಿಸಿದರು
ಕೋಡಿದ್ದರೂ ತಿವಿಯದೆ ತಲೆಹಾಕುವುದ ಕಲಿಸಿದರು
ಗಂಡ ಬೇರನ್ನು ಕೊಟ್ಟು ಕಸಿ ಮಾಡಿ
ನರಹಿಚುಕಿ ಜೀವಧಾತು ಹರಿಯದೆ ಬರಲಾಗಿಸಿ
ಕೆಂಡ ಕೆರಳದಂತೆ ತಣ್ಣೀರು ಹಾಕಿ
ಷಂಡತನವ ಕಲಿಸಿದರು ನಮ್ಮವರು

ತಲೆ ಪಂಜರಪಕ್ಷಿಗೆ ಗಿಳಿಯೋದಿಸಿ
ಮೂಗುಹಿಡಿಸಿ ಜಪ ಮಾಡ ಕಲಿಸಿದರು
ತೀರ್ಥಕುಡಿಸಿ ಮಬ್ಬೇರಿಸಿ ಗೂಡಿನಲ್ಲಿಹಪರವೆಂದು ಕೂಡಿಹಾಕಿ
ಬಯಲಾಗಸದ ತಿಳಿಹೊಳೆಯ ಗಿರಿನೀರ ತನಿವಣ್ಣ ರಸಗಳಿಗೆಲ್ಲ
ಎರವಾಗಿಸಿ ಬಂದೋಬಸ್ತಾಗಿ ಬಂಧಿಸಿದರೋ ನಾಗರಿಕ ನೆರಳಲ್ಲಿ
ಕತ್ತಿಕೋಲು ಕುಣಿದಾಡುವ ಗೊಂಡಾರಣ್ಯದಲ್ಲಿ
ಮುಳ್ಳುಗಳೆದ್ದೆದ್ದು ಕಣ್ಣು ಚುಚ್ಚುವಲ್ಲಿ
ಕೋರೆ ಹಲ್ಲುಗಳು ಮಸೆಯುವಲ್ಲಿ ಕೆನ್ನಾಲಿಗೆ ಚಾಚಿದಲ್ಲಿ
ಕಲ್ಲು ಗುಂಡು ಸದಾ ಸುರಿಯುವಲ್ಲಿ
ಬೋಳಾಗಿಸಿ ಬಿಳಿಚು ಮಲ್ಲಿಗೆಯಾಗಿಸಿ
ಬಾಳಾ ಬಾಳೆಂದು ಕಲಿಸಿಬಿಟ್ಟರು ನಮ್ಮವರು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...