ಗಾರುಡಿಗ

ಇದು ಮಂತ್ರ; ಅರ್‍ಥಕೊಗ್ಗದ ಶಬ್ದಗಳ ಪವಣಿಸುವ ತಂತ್ರ;
ತಾನೆ ತಾನೆ ಸಮರ್‍ಥಛಂದ; ದೃಗ್ಬಂಧ-ದಿ-
ಗ್ಬಂಧ; ಪ್ರಾಣದ ಕೆಚ್ಚು ಕೆತ್ತಿ ರಚಿಸಿದೆ; ಉಸಿರ
ಹೆದೆಗೆ ಹೂಡಿದ ಗರಿಯು ಗುರಿಯ ನಿರಿಯಿಟ್ಟು ಬರು-
ತಿದೆ ತೂರಿ ಲೀಲೆಯಲನಾಯಾಸ. ಗರುಡನಂ-
ತೆರಗಿ ಬಂದಿತು-ಭ್ರಮೆಯೊ? ಹಮ್ಮದವೊ? ಸಂಜೊ! ಮರ-
ಣವೊ? ನಿದ್ದೆಯೋ! ಮೋಹನವೊ! ಎಚ್ಚರಕೆ ಕವಿದ
ಮರೆವೊ! ಕನಸೋ! ನನಸು-ಎಲ್ಲ ಹಾಲೋ ಹಾಲು!

ಎಲೆ ಹಾವೆ! ಹೊಟ್ಟೆ ಹೊಸೆಯುವ ಜಂತು! ನಿನಗೆ ಕಿವಿ-
ಯಿಲ್ಲ, ನಾಲಿಗೆಯೆರಡು; ಹಲ್ಲೊಳಿದೆ ವಿಷವು; ನಿ-
ನ್ನನ್ನ ಗಾಳಿಯು; ನೀನು ಪಾತಾಳಕಿಳಿದರೂ
ಮತ್ತೆ ಕಾಡುವೆ; ರಸಿಕನೆನೆ ಚಂದ ತಲೆದೂಗಿ
ನಾಳೆ ಕಾರುವೆ ಗರಳ! ಬಯಸುತಿರು, ಬಯಸುತಿರು..
ಕಂಡಿಲ್ಲವೇನೊ ಅಂಗೈಯ ಗರುಡನ ಗೆರೆಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭೂಮಿಯ ಎದೆ ಮುಟ್ಟಿತು
Next post ಮುನಿಯನ್ ಮೊಕ್ಕ್ ಮುಸ್ಟಿ

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…