ಅದೃಷ್ಟ

ಕಣ್ಣ ಕಾಣ್ಕೆಯ ಮೀರಿ, ಕಣ್ಣ ಕಟ್ಟಿದ ರೂಹೆ!
ಬಣ್ಣನೆಯ ಬಣ್ಣಕೂ ಸಿಗದೆ ನೀನು;
ಹುಟ್ಟುಕಟ್ಟನು ಹರಿದು, ಹಾರುತಿರುವೀ ಊಹೆ,
ಬರೆಯಲಿಕೆ ನಿನ್ನನ್ನೆ ಹವಣಿಸುವದೇನು?

ಲಹರಿಗೂ ತರಲ, ನೀ ನೆರಳಿಗೂ ವಿರಲ, ಸುಳಿ-
ಯೆಲರಿಗೂ ಚಂಚಲನು ಇರುವೆಯಂತೆ-
ಬರುವಾಗ ಬರಲಿ ಫಲವೆಂದು ತಾಳ್ಮೆಯ ತಾಳಿ
ಕಾಡಹೂವಿನ ತೆರದಿ, ಕಾದು ನಿಂತೆ.

ನವಿರನವಿಲಿಲ್ಲಿ ನಿಮಿನಿಮಿರಿ ಕುಣಿಯುತಿದೆ
ಕಂಬನಿಯ ಜಡಿಮಳೆಯು ಜಿನುಗಿ ತಣಿಯುತಿದೆ
ಹೊಚ್ಚ ಹೊಸ ಆಸೆಗಳು ಚಿಗಿತು ನಗೆ ನನೆತು
ಫಲವೇನೆ ಬರಲಿ, ಅಣಿಯಾಗಿರುವದಿನಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸತ್ಯದ ವಿಳಾಸ
Next post ನಂಜಿ – ರತ್ನ

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…