ಗೃಹಿಣಿ

ಏಳು ಮೆಟ್ಟಿನ ಹುಲಿಯ ಬೀರ ಬೇಂಟೆಯ ಬಿಡಿಸಿ
ಮಗುವ ಮುದ್ದಾಡುವೊಲು ಮಾಡಿದಾಕೆ.
ಗುರಿಯಿಟ್ಟ ಕಣ್ಣುಗಳ, ಕಿವಿಯೂದಿ, ಹೊರಳಿಸುತ
ತಾನೆ ತನ್ನಷ್ಟಕ್ಕೆ ಹಾಡಿದಾಕೆ.

ತಳಿರಿನುಡುಗೆಯನುಟ್ಟು ಗರಿತೊಡುವುಗಳ ತೊಟ್ಟು
ಅಡವಿಯಲಿ ಹೂದೋಟ ಹೂಡಿದಾಕೆ.
ಗಿಡಕೆ ಗುಡಿಯನು ಕಟ್ಟಿ, ಬೇರೊಂದು ಲೋಕವನು
ಮೂಕಮಾತುಗಳಿಂದ ಬೇಡಿದಾಕೆ.

ಮನೆಯ ಹೊಸ್ತಿಲಿಕೆ ಶುಭ ಬರೆಯುವಾಕೆ.
ಮಂಗಲವೆ ಬಾರೆಂದು ಕರೆಯುವಾಕೆ.
ಬಾಳಸುಳಿಯಲಿ ಬೆಳೆಯ ತೋರುವಾಕೆ.
ದಿನದಿನವು ನವ ಜಯವ ಕೋರುವಾಕೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೂನ್ಯಾನ್ವೇಷಣೆ
Next post ನಂಜಿ ರತ್ನ ತೋಟ್ಕ್ ಓಗಿದ್ರು

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…