Home / ಕವನ / ಕವಿತೆ / ಅನುಮಾನ

ಅನುಮಾನ

ಕಣ್ಣು ಕುಕ್ಕಿಸಿ ಮಣ್ಣಾಗುವ ಬೆಳಕೋ
ಬೆಳಕನಾಯೆಂದು ನುಂಗಿ ನೊಣೆವ ಕತ್ತಲೋ
ಯಾವುದು ಪ್ರಬಲ ಯಾವುದು ನಿತ್ಯಸತ್ಯ
ಎಂಬುದು ನನಗಿನ್ನೂ ಅನುಮಾನ
ತೊಳೆಯ ಬಂದ ತೊರೆಗಳೆಲ್ಲ ಸಂದುಗೊಂದುಗಳಲ್ಲಿ ಬತ್ತಿಹೋಗುತ್ತವೆ
ನಿಂತ ಕೆಲವು ಕಡೆ ಹಳಸಿ ನಾತವಾಗಿ ಯಾರಿಗೂ ಬೇಡವಾಗುತ್ತವೆ
ಅಲ್ಲಿ ಕಟಗುಟ್ಟುವ ಕಪ್ಪೆಸದ್ದೊಂದೆ ಕಿವಿಕೊರೆಯುತ್ತದೆ

ರೋಗಿಯ ವಾಸಿ ಮಾಡಿ ಬಂದವನೇ
ರೋಗಿಗಿಂತ ಮುಂಚೆ ತಾನೇ ಗೊಟಕ್ಕೆಂದನೇನೋ
ತೊಳೆಯ ಬಂದ ತೋಟಿಗ ಬಗ್ಗಡವಾದ ಕೆಸರ ಹಳ್ಳದಲ್ಲಿ
ತಾನೇ ಕೊಳೆ ಹಚ್ಚಿಕೊಂಡು ಕೊಚ್ಚಿ ಹೋದನೇನೋ
ತೊಳೆಸಿಕೊಳ್ಳುವವರೆ ಕಿಸಕ್ಕನೆ ನಕ್ಕು
ಎಮ್ಮೆ ಹಂದಿಗಳಂತೆ ಹಾಗೆಯೇ ಬಿದ್ದುಕೊಂಡರೇನೋ

ಕತ್ತಲಲ್ಲಿ ನಡೆಸಲೆಂದು ದೀಪ ತಂದವನ
ಹಿಂದೆ ಹಿಂದೆ ಹಿಂಬಾಲಿಸಿ ಉಫ್ಫೆಂದೂದಿ ದೀಪವನಾರಿಸಿ
ಬೆಳಕಿನವನನ್ನೇ ಕತ್ತಲ ಕಂದಕದಲ್ಲಿ ನೂಕಿದರೇನೋ

ಪರ್ಣಶಾಲೆಗಳ ಮರಗಳ ಕೆಳಗೆ ಕುಳಿತು ಎಲೆ ಸಂದುಗಳಲ್ಲಿ
ಕಾಣುವ ಕಿರಣ ಕನಸೇ ಬೆಳಕೆಂಬ ಭ್ರಮೆಯಾಯಿತೇನೋ ಅಥವಾ
ಇವೆರಡರ ಕಣ್ಣು ಮುಚ್ಚುಲೆಯಾಟವನಾಡಿಸುವ
ಬೆಳಕಿನ ಬೆಳಕೋ ಕತ್ತಲೆಯ ಕತ್ತಲೋ
ಏನೂ ಬೇರೆಯೇ ಇದೆಯೇನೋ
ನನಗಿನ್ನೂ ಅನುಮಾನ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...