Home / ಕವನ / ಕವಿತೆ / ನಲಿವಾಗಿರಲಿ ಸದಾ

ನಲಿವಾಗಿರಲಿ ಸದಾ

ನುಡಿಯೊಳಗಣಾ ನಿನ್ನ ನುಡಿಯಲಿ
ಕನ್ನಡತನವು ನಲಿವಾಗಿರಲಿ ಸದಾ

ನಡೆಯೊಳಗಣಾ ನಿನ್ನ ನಡೆಯಲಿ
ಕನ್ನಡತನವು ಹಸಿರುಸಿರಾಗಿರಲಿ ಸದಾ

ನೀ ಹುಟ್ಟಿದ ಈ ಮಣ್ಣಿನ ಕಣ್ಣಾಗಿ ಜನುಮ
ಜನುಮಕೂ ನಿನ್ನ ಕೀರ್ತಿ ಬೆಳಗಲಿ ಹಣತೆಯಾಗಿ ಸದಾ

ದುರಭಿಮಾನದ ಕೊಳೆಯ ತೊಳೆದೊಗೆದು
ಮಾನಭಿಮಾನದ ಮಾನ್ಯತೆ ನೆಲೆಯಾಗಿರಲಿ ಸದಾ

ಜನ್ಮಭೂಮಿಯ ಕಣಕಣ ಕರುಳ ಬಳ್ಳಿ
ಧಮನಿ ಧಮನಿಯಲ್ಲೂ ಸ್ಥಿರತೆ ಕಾಣಗೈಯಲಿ ಸದಾ

ಬಂಧನಗಳ ಕಡು ಹಿಂಸೆ ಕಡಿವಾಣದ
ಸಲಾಕೆಗಳ ಬಿಚ್ಚೊಗೆದೊಗೆದು ಸದಾ

ನೋವು ನಲಿವ ನುಂಗಿತಾ ಬೇಸತ್ತ ಬಾಳಿಗೆ
ಹಸನಾಗಿ ಸುಧೆಯಾಗಿರಬೇಕು ನೀ ಸದಾ

ಧರ್ಮ ಕರ್ಮ ಎಂಬ ಕೈ ಗನ್ನಡಿ ಹಿಡಿದು ಭಾವನೆಗಳ
ಮುಷ್ಠಿಯಲಿ ಪುಷ್ಠಿಯಾಗಿರಬೇಕು ಬಾಳಿಗೆ ಸದಾ

ಕನ್ನಡತಾಯ ಮಡಿಲ ಮಣಿ ಮುತ್ತಾಗಿ
ನವಿರಾಗಿ ನಲಿಯುತ್ತಿರ ಬೇಕು ಕನ್ನಡ ಕಣ್ಮಣಿಯಾಗಿ ಸದಾ
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...