Home / ಕವನ / ಕವಿತೆ / ಕರುನಾಡು ತಾಯ್ನಾಡು

ಕರುನಾಡು ತಾಯ್ನಾಡು

ಕರುನಾಡು ತಾಯ್ನಾಡು
ಕನ್ನಡದಾ ಸಿರಿನಾಡು
ಕನ್ನಡವು ಎಂದೆನಿತು ನುಡಿ ಮನವೆ||

ಶಿಲ್ಪ ಸಿಂಧೂರ ಕಲ್ಪಧಾರೆಯಲ್ಲಿ
ಪವಡಿಸುತಿದೆ ನಿನ್ನಲ್ಲಿ ಅನಂತಬಿಂಬ
ಸುಯ್ ಗುಟ್ಟುವ ತಂಗಾಳಿಯಲಿ
ಗಾನ ಝೇಂಕಾರ ಕೇಳ ಬರುತಿದೆ ನಿತ್ಯ ಸತ್ಯ||

ಗಗನ ಮೌನ ಸದೃಶ್ಯಧಾರೆಯಲ್ಲಿ
ಕಾರ್ಮೋಡಗಳ ಸೆರೆಯಲ್ಲಿ
ಸಿಡಿಲೊಂದು ಬಡಿದೆಬ್ಬಸಿ ಪೇಳುತಿದೆ ನಿತ್ಯಸತ್ಯ||

ಜೋಗದ ಸಿರಿಯಾಗಿ ಐಸಿರಿಯ ತೋರಿ
ಜಲಪಾತದ ಅಲೆಯಾಗಿ ಕಲರವ ದನಿಸೇರಿ
ಮಿಂಚು ಹೊಳಪಾಗಿ ತಾಯ್‌ನಾಡಸಿರಿನುಡಿಯುತಿದೆ ನಿತ್ಯಸತ್ಯ||

ಶಶಿಯು ಬಂದಾಗ ಉಷೆಯ ಕಂಡಾಗ
ಹೂಗಳರಳಿದವು ಆಗ ಚೈತ್ರ ಬಂತೊಂದು
ವರ್ಷದಾಗ ನಗುನಗುತಲಿ ಹಾಡೊಂದಹಾಡಿ
ನಲಿಯಿತು ಬೃ೦ಗ ಕನ್ನಡವೇ ನಿತ್ಯಸತ್ಯ||

ಅಮ್ಮಾ ಎಂದೆನುತಲಿ ನುಡಿಯುತ
ಬಂತೊಂದು ಶಿಶುವು ಹಾಲಕರೆಯ
ದನಿಯಲ್ಲಿ ಮುಗಳ್ ನಗೆಯ ಚೆಲ್ಲುತಾ
ಹಾಲ್‌ಗಲ್ಲ ಸವರಿ ರವಿಯು ಹೊಂಗಿರಣಕೆ
ಮರೆಮಾಚಿ ನಾಚಿ ನುಡಿಯಿತು ನಿತ್ಯಸತ್ಯ||
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...