Home / ಕಥೆ / ಕಿರು ಕಥೆ / ಬಂಗಾರದ ನಾಣ್ಯ

ಬಂಗಾರದ ನಾಣ್ಯ

ಒಂದು ಪರ್ವತದ ತಪ್ಪಲು. ಅಲ್ಲಿ ಒಂದು ಸುಂದರ ತಪೋವನ. ಅಲ್ಲಿ ನೆಲೆಯಾಗಿದ್ದ ಗುರುವಿನ ಬಳಿ ಎರಡು ಮಹಾಮೂರ್ಖರ ಗುಂಪು ವಿದ್ಯೆ ಕಲಿಯಲು ಬರುತಿತ್ತು. ಅವರಲ್ಲಿ ಸ್ವಾರ್ಥ, ಈರ್ಷೆ ತುಂಬಿಕೊಂಡಿತ್ತು. ಎರಡು ಗುಂಪುಗಳು ಒಂದೇ ದಾರಿಯಲ್ಲಿ ಬಂದರು. ಹೆಜ್ಜೆ ಹೆಜ್ಜೆಯಲ್ಲಿ ಘರ್ಷಣೆ ಮಾಡುತ್ತಿದ್ದರು. ಹಾದಿಯಲ್ಲಿ ಬರುವಾಗ ವೃಕ್ಷವನ್ನು ಕಂಡರೆ, ಇದು ಇಬ್ಬರದೂ ಸಮ ಪಾಲೆಂದು ಕತ್ತರಿಸಿ ಭಾಗ ಮಾಡುತ್ತಿದ್ದರು. ಹೂಗಳನ್ನು ಬಳ್ಳಿಗಳನ್ನು ಹರಿದು ಹಂಚಿಕೊಳ್ಳುತ್ತಿದ್ದರು. ನಲಿದಾಡುವ ನವಿಲುಗಳನ್ನು ಹಿಡಿದು ರಕ್ಕೆ ಪುಕ್ಕಗಳನ್ನು, ಕಿತ್ತಿ ಹಂಚಿಕೊಳ್ಳುತ್ತಿದ್ದರು. ಹಾಡುವಹಕ್ಕಿಯ ಕೊರಳನ್ನು ಹಿಚುಕಿ, ನನ್ನದು ರಕ್ಕೆ, ನಿನ್ನದು ಪುಕ್ಕ ಎಂದು ಜಗಳವಾಡುತ್ತಿದ್ದರು. ಬೆಟ್ಟದ ಕಲ್ಲು ಗುಡ್ಡಗಳನ್ನು ಎಣಿಸಿಗುಣಿಸಿ ಭಾಗಮಾಡುತ್ತಿದ್ದರು. ಇಂತಹ ಜಗಳ ಗಂಟ ಗುಂಪಿನ ಶಿಷ್ಯರ ನಡುವೆ ಗುರುಗಳು ಬಂದು “ಹೀಗೆ ಏಕೆ ಕಾದಾಡುತ್ತೀರಿ?”

“ಎಲಾ! ಶಿಷ್ಯರೇ ಇಲ್ಲಿ ಬನ್ನಿ. ಹೇಳಿ.”
“ಆಕಾಶ ಯಾರದು?”
ಶಿಷ್ಯರೆಲ್ಲ ಒಂದು ಧ್ವನಿಯಲ್ಲಿ ಉತ್ತರಿಸಿದರು.
“ಎಲ್ಲರದೂ”
“ಭೂಮಿ ಯಾರದು?”
“ಎಲ್ಲರದೂ”
“ಜಲಪಾತ, ನದಿ, ಸಾಗರ ಯಾರದು?”
“ಎಲ್ಲರದೂ”
“ನಕ್ಷತ್ರ, ಸೂರ್ಯ, ಚಂದ್ರ ಯಾರದು?”
“ಎಲ್ಲರದೂ”
“ನೀರು, ಗಾಳಿ, ಬೆಳಕೂ ಯಾರದು?”
“ಎಲ್ಲರದೂ”
“ಗುರು, ದೈವ, ಜಗತ್ತು ಯಾರದು?”
“ಎಲ್ಲರದೂ”
“ಇಂದಿನ ಪಾಠವಾಯಿತು ನಾಳೆ ಬನ್ನಿ” ಎಂದರು ಗುರುಗಳು.

ಎಲ್ಲರೂ ಮರುದಿನ ಬರುವಾಗ ಏಟು ಪೆಟ್ಟುಗಳನ್ನು ತಿಂದು ರಕ್ತ ಸೋರುತ್ತಾ ನಿಂತರು. ಶಿಷ್ಯರ ತಂಡವನ್ನು ನೋಡಿ ಏನಾಯಿತೆಂದು ಗುರುಗಳು ಕೇಳಿದರು.

“ನೆನ್ನೆ ರಾತ್ರಿ ಕೊಳದಲ್ಲಿ, ಚಂದ್ರನಂತೆ ಕಾಣುವ ಬಂಗಾರದ ನಾಣ್ಯಕ್ಕಾಗಿ ನಾವೆಲ್ಲ ಹೋರಾಡಿದವು. ಪರಿಣಾಮವಾಗಿ ನಮ್ಮ ಸ್ಥಿತಿ ಹೀಗಿದೆ” ಎಂದರು.

“ನಿಮ್ಮ ಶಿಷ್ಯ ವೃತ್ತಿಗೆ ಇಂದೇ ನಿವೃತ್ತಿ.” ಎಂದು ಮೂರ್ಖ ಶಿಷ್ಯರನ್ನು ತಪೋವನದಿಂದ ಆಚೆ ಗಡಿಪಾರು ಮಾಡಿದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...