ಬಂಗಾರದ ನಾಣ್ಯ

ಒಂದು ಪರ್ವತದ ತಪ್ಪಲು. ಅಲ್ಲಿ ಒಂದು ಸುಂದರ ತಪೋವನ. ಅಲ್ಲಿ ನೆಲೆಯಾಗಿದ್ದ ಗುರುವಿನ ಬಳಿ ಎರಡು ಮಹಾಮೂರ್ಖರ ಗುಂಪು ವಿದ್ಯೆ ಕಲಿಯಲು ಬರುತಿತ್ತು. ಅವರಲ್ಲಿ ಸ್ವಾರ್ಥ, ಈರ್ಷೆ ತುಂಬಿಕೊಂಡಿತ್ತು. ಎರಡು ಗುಂಪುಗಳು ಒಂದೇ ದಾರಿಯಲ್ಲಿ ಬಂದರು. ಹೆಜ್ಜೆ ಹೆಜ್ಜೆಯಲ್ಲಿ ಘರ್ಷಣೆ ಮಾಡುತ್ತಿದ್ದರು. ಹಾದಿಯಲ್ಲಿ ಬರುವಾಗ ವೃಕ್ಷವನ್ನು ಕಂಡರೆ, ಇದು ಇಬ್ಬರದೂ ಸಮ ಪಾಲೆಂದು ಕತ್ತರಿಸಿ ಭಾಗ ಮಾಡುತ್ತಿದ್ದರು. ಹೂಗಳನ್ನು ಬಳ್ಳಿಗಳನ್ನು ಹರಿದು ಹಂಚಿಕೊಳ್ಳುತ್ತಿದ್ದರು. ನಲಿದಾಡುವ ನವಿಲುಗಳನ್ನು ಹಿಡಿದು ರಕ್ಕೆ ಪುಕ್ಕಗಳನ್ನು, ಕಿತ್ತಿ ಹಂಚಿಕೊಳ್ಳುತ್ತಿದ್ದರು. ಹಾಡುವಹಕ್ಕಿಯ ಕೊರಳನ್ನು ಹಿಚುಕಿ, ನನ್ನದು ರಕ್ಕೆ, ನಿನ್ನದು ಪುಕ್ಕ ಎಂದು ಜಗಳವಾಡುತ್ತಿದ್ದರು. ಬೆಟ್ಟದ ಕಲ್ಲು ಗುಡ್ಡಗಳನ್ನು ಎಣಿಸಿಗುಣಿಸಿ ಭಾಗಮಾಡುತ್ತಿದ್ದರು. ಇಂತಹ ಜಗಳ ಗಂಟ ಗುಂಪಿನ ಶಿಷ್ಯರ ನಡುವೆ ಗುರುಗಳು ಬಂದು “ಹೀಗೆ ಏಕೆ ಕಾದಾಡುತ್ತೀರಿ?”

“ಎಲಾ! ಶಿಷ್ಯರೇ ಇಲ್ಲಿ ಬನ್ನಿ. ಹೇಳಿ.”
“ಆಕಾಶ ಯಾರದು?”
ಶಿಷ್ಯರೆಲ್ಲ ಒಂದು ಧ್ವನಿಯಲ್ಲಿ ಉತ್ತರಿಸಿದರು.
“ಎಲ್ಲರದೂ”
“ಭೂಮಿ ಯಾರದು?”
“ಎಲ್ಲರದೂ”
“ಜಲಪಾತ, ನದಿ, ಸಾಗರ ಯಾರದು?”
“ಎಲ್ಲರದೂ”
“ನಕ್ಷತ್ರ, ಸೂರ್ಯ, ಚಂದ್ರ ಯಾರದು?”
“ಎಲ್ಲರದೂ”
“ನೀರು, ಗಾಳಿ, ಬೆಳಕೂ ಯಾರದು?”
“ಎಲ್ಲರದೂ”
“ಗುರು, ದೈವ, ಜಗತ್ತು ಯಾರದು?”
“ಎಲ್ಲರದೂ”
“ಇಂದಿನ ಪಾಠವಾಯಿತು ನಾಳೆ ಬನ್ನಿ” ಎಂದರು ಗುರುಗಳು.

ಎಲ್ಲರೂ ಮರುದಿನ ಬರುವಾಗ ಏಟು ಪೆಟ್ಟುಗಳನ್ನು ತಿಂದು ರಕ್ತ ಸೋರುತ್ತಾ ನಿಂತರು. ಶಿಷ್ಯರ ತಂಡವನ್ನು ನೋಡಿ ಏನಾಯಿತೆಂದು ಗುರುಗಳು ಕೇಳಿದರು.

“ನೆನ್ನೆ ರಾತ್ರಿ ಕೊಳದಲ್ಲಿ, ಚಂದ್ರನಂತೆ ಕಾಣುವ ಬಂಗಾರದ ನಾಣ್ಯಕ್ಕಾಗಿ ನಾವೆಲ್ಲ ಹೋರಾಡಿದವು. ಪರಿಣಾಮವಾಗಿ ನಮ್ಮ ಸ್ಥಿತಿ ಹೀಗಿದೆ” ಎಂದರು.

“ನಿಮ್ಮ ಶಿಷ್ಯ ವೃತ್ತಿಗೆ ಇಂದೇ ನಿವೃತ್ತಿ.” ಎಂದು ಮೂರ್ಖ ಶಿಷ್ಯರನ್ನು ತಪೋವನದಿಂದ ಆಚೆ ಗಡಿಪಾರು ಮಾಡಿದರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭೂಮಿ ಬರಡಾಗುವುದೆಂದರದು ಮತ್ತೇನು ? ಏಡ್ಸ್ ತಾನೇ ?

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…