Home / ಕಥೆ / ಕಿರು ಕಥೆ / ಬಂಗಾರದ ನಾಣ್ಯ

ಬಂಗಾರದ ನಾಣ್ಯ

ಒಂದು ಪರ್ವತದ ತಪ್ಪಲು. ಅಲ್ಲಿ ಒಂದು ಸುಂದರ ತಪೋವನ. ಅಲ್ಲಿ ನೆಲೆಯಾಗಿದ್ದ ಗುರುವಿನ ಬಳಿ ಎರಡು ಮಹಾಮೂರ್ಖರ ಗುಂಪು ವಿದ್ಯೆ ಕಲಿಯಲು ಬರುತಿತ್ತು. ಅವರಲ್ಲಿ ಸ್ವಾರ್ಥ, ಈರ್ಷೆ ತುಂಬಿಕೊಂಡಿತ್ತು. ಎರಡು ಗುಂಪುಗಳು ಒಂದೇ ದಾರಿಯಲ್ಲಿ ಬಂದರು. ಹೆಜ್ಜೆ ಹೆಜ್ಜೆಯಲ್ಲಿ ಘರ್ಷಣೆ ಮಾಡುತ್ತಿದ್ದರು. ಹಾದಿಯಲ್ಲಿ ಬರುವಾಗ ವೃಕ್ಷವನ್ನು ಕಂಡರೆ, ಇದು ಇಬ್ಬರದೂ ಸಮ ಪಾಲೆಂದು ಕತ್ತರಿಸಿ ಭಾಗ ಮಾಡುತ್ತಿದ್ದರು. ಹೂಗಳನ್ನು ಬಳ್ಳಿಗಳನ್ನು ಹರಿದು ಹಂಚಿಕೊಳ್ಳುತ್ತಿದ್ದರು. ನಲಿದಾಡುವ ನವಿಲುಗಳನ್ನು ಹಿಡಿದು ರಕ್ಕೆ ಪುಕ್ಕಗಳನ್ನು, ಕಿತ್ತಿ ಹಂಚಿಕೊಳ್ಳುತ್ತಿದ್ದರು. ಹಾಡುವಹಕ್ಕಿಯ ಕೊರಳನ್ನು ಹಿಚುಕಿ, ನನ್ನದು ರಕ್ಕೆ, ನಿನ್ನದು ಪುಕ್ಕ ಎಂದು ಜಗಳವಾಡುತ್ತಿದ್ದರು. ಬೆಟ್ಟದ ಕಲ್ಲು ಗುಡ್ಡಗಳನ್ನು ಎಣಿಸಿಗುಣಿಸಿ ಭಾಗಮಾಡುತ್ತಿದ್ದರು. ಇಂತಹ ಜಗಳ ಗಂಟ ಗುಂಪಿನ ಶಿಷ್ಯರ ನಡುವೆ ಗುರುಗಳು ಬಂದು “ಹೀಗೆ ಏಕೆ ಕಾದಾಡುತ್ತೀರಿ?”

“ಎಲಾ! ಶಿಷ್ಯರೇ ಇಲ್ಲಿ ಬನ್ನಿ. ಹೇಳಿ.”
“ಆಕಾಶ ಯಾರದು?”
ಶಿಷ್ಯರೆಲ್ಲ ಒಂದು ಧ್ವನಿಯಲ್ಲಿ ಉತ್ತರಿಸಿದರು.
“ಎಲ್ಲರದೂ”
“ಭೂಮಿ ಯಾರದು?”
“ಎಲ್ಲರದೂ”
“ಜಲಪಾತ, ನದಿ, ಸಾಗರ ಯಾರದು?”
“ಎಲ್ಲರದೂ”
“ನಕ್ಷತ್ರ, ಸೂರ್ಯ, ಚಂದ್ರ ಯಾರದು?”
“ಎಲ್ಲರದೂ”
“ನೀರು, ಗಾಳಿ, ಬೆಳಕೂ ಯಾರದು?”
“ಎಲ್ಲರದೂ”
“ಗುರು, ದೈವ, ಜಗತ್ತು ಯಾರದು?”
“ಎಲ್ಲರದೂ”
“ಇಂದಿನ ಪಾಠವಾಯಿತು ನಾಳೆ ಬನ್ನಿ” ಎಂದರು ಗುರುಗಳು.

ಎಲ್ಲರೂ ಮರುದಿನ ಬರುವಾಗ ಏಟು ಪೆಟ್ಟುಗಳನ್ನು ತಿಂದು ರಕ್ತ ಸೋರುತ್ತಾ ನಿಂತರು. ಶಿಷ್ಯರ ತಂಡವನ್ನು ನೋಡಿ ಏನಾಯಿತೆಂದು ಗುರುಗಳು ಕೇಳಿದರು.

“ನೆನ್ನೆ ರಾತ್ರಿ ಕೊಳದಲ್ಲಿ, ಚಂದ್ರನಂತೆ ಕಾಣುವ ಬಂಗಾರದ ನಾಣ್ಯಕ್ಕಾಗಿ ನಾವೆಲ್ಲ ಹೋರಾಡಿದವು. ಪರಿಣಾಮವಾಗಿ ನಮ್ಮ ಸ್ಥಿತಿ ಹೀಗಿದೆ” ಎಂದರು.

“ನಿಮ್ಮ ಶಿಷ್ಯ ವೃತ್ತಿಗೆ ಇಂದೇ ನಿವೃತ್ತಿ.” ಎಂದು ಮೂರ್ಖ ಶಿಷ್ಯರನ್ನು ತಪೋವನದಿಂದ ಆಚೆ ಗಡಿಪಾರು ಮಾಡಿದರು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...