Home / ಕಥೆ / ಕಿರು ಕಥೆ / ಬಂಗಾರದ ನಾಣ್ಯ

ಬಂಗಾರದ ನಾಣ್ಯ

ಒಂದು ಪರ್ವತದ ತಪ್ಪಲು. ಅಲ್ಲಿ ಒಂದು ಸುಂದರ ತಪೋವನ. ಅಲ್ಲಿ ನೆಲೆಯಾಗಿದ್ದ ಗುರುವಿನ ಬಳಿ ಎರಡು ಮಹಾಮೂರ್ಖರ ಗುಂಪು ವಿದ್ಯೆ ಕಲಿಯಲು ಬರುತಿತ್ತು. ಅವರಲ್ಲಿ ಸ್ವಾರ್ಥ, ಈರ್ಷೆ ತುಂಬಿಕೊಂಡಿತ್ತು. ಎರಡು ಗುಂಪುಗಳು ಒಂದೇ ದಾರಿಯಲ್ಲಿ ಬಂದರು. ಹೆಜ್ಜೆ ಹೆಜ್ಜೆಯಲ್ಲಿ ಘರ್ಷಣೆ ಮಾಡುತ್ತಿದ್ದರು. ಹಾದಿಯಲ್ಲಿ ಬರುವಾಗ ವೃಕ್ಷವನ್ನು ಕಂಡರೆ, ಇದು ಇಬ್ಬರದೂ ಸಮ ಪಾಲೆಂದು ಕತ್ತರಿಸಿ ಭಾಗ ಮಾಡುತ್ತಿದ್ದರು. ಹೂಗಳನ್ನು ಬಳ್ಳಿಗಳನ್ನು ಹರಿದು ಹಂಚಿಕೊಳ್ಳುತ್ತಿದ್ದರು. ನಲಿದಾಡುವ ನವಿಲುಗಳನ್ನು ಹಿಡಿದು ರಕ್ಕೆ ಪುಕ್ಕಗಳನ್ನು, ಕಿತ್ತಿ ಹಂಚಿಕೊಳ್ಳುತ್ತಿದ್ದರು. ಹಾಡುವಹಕ್ಕಿಯ ಕೊರಳನ್ನು ಹಿಚುಕಿ, ನನ್ನದು ರಕ್ಕೆ, ನಿನ್ನದು ಪುಕ್ಕ ಎಂದು ಜಗಳವಾಡುತ್ತಿದ್ದರು. ಬೆಟ್ಟದ ಕಲ್ಲು ಗುಡ್ಡಗಳನ್ನು ಎಣಿಸಿಗುಣಿಸಿ ಭಾಗಮಾಡುತ್ತಿದ್ದರು. ಇಂತಹ ಜಗಳ ಗಂಟ ಗುಂಪಿನ ಶಿಷ್ಯರ ನಡುವೆ ಗುರುಗಳು ಬಂದು “ಹೀಗೆ ಏಕೆ ಕಾದಾಡುತ್ತೀರಿ?”

“ಎಲಾ! ಶಿಷ್ಯರೇ ಇಲ್ಲಿ ಬನ್ನಿ. ಹೇಳಿ.”
“ಆಕಾಶ ಯಾರದು?”
ಶಿಷ್ಯರೆಲ್ಲ ಒಂದು ಧ್ವನಿಯಲ್ಲಿ ಉತ್ತರಿಸಿದರು.
“ಎಲ್ಲರದೂ”
“ಭೂಮಿ ಯಾರದು?”
“ಎಲ್ಲರದೂ”
“ಜಲಪಾತ, ನದಿ, ಸಾಗರ ಯಾರದು?”
“ಎಲ್ಲರದೂ”
“ನಕ್ಷತ್ರ, ಸೂರ್ಯ, ಚಂದ್ರ ಯಾರದು?”
“ಎಲ್ಲರದೂ”
“ನೀರು, ಗಾಳಿ, ಬೆಳಕೂ ಯಾರದು?”
“ಎಲ್ಲರದೂ”
“ಗುರು, ದೈವ, ಜಗತ್ತು ಯಾರದು?”
“ಎಲ್ಲರದೂ”
“ಇಂದಿನ ಪಾಠವಾಯಿತು ನಾಳೆ ಬನ್ನಿ” ಎಂದರು ಗುರುಗಳು.

ಎಲ್ಲರೂ ಮರುದಿನ ಬರುವಾಗ ಏಟು ಪೆಟ್ಟುಗಳನ್ನು ತಿಂದು ರಕ್ತ ಸೋರುತ್ತಾ ನಿಂತರು. ಶಿಷ್ಯರ ತಂಡವನ್ನು ನೋಡಿ ಏನಾಯಿತೆಂದು ಗುರುಗಳು ಕೇಳಿದರು.

“ನೆನ್ನೆ ರಾತ್ರಿ ಕೊಳದಲ್ಲಿ, ಚಂದ್ರನಂತೆ ಕಾಣುವ ಬಂಗಾರದ ನಾಣ್ಯಕ್ಕಾಗಿ ನಾವೆಲ್ಲ ಹೋರಾಡಿದವು. ಪರಿಣಾಮವಾಗಿ ನಮ್ಮ ಸ್ಥಿತಿ ಹೀಗಿದೆ” ಎಂದರು.

“ನಿಮ್ಮ ಶಿಷ್ಯ ವೃತ್ತಿಗೆ ಇಂದೇ ನಿವೃತ್ತಿ.” ಎಂದು ಮೂರ್ಖ ಶಿಷ್ಯರನ್ನು ತಪೋವನದಿಂದ ಆಚೆ ಗಡಿಪಾರು ಮಾಡಿದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...