Home / ಕಥೆ / ಕಿರು ಕಥೆ / ಬೇಸರವಿಲ್ಲದ ಲಿಪಿ

ಬೇಸರವಿಲ್ಲದ ಲಿಪಿ

ಒಬ್ಬ ಸನ್ಯಾಸಿ ಸಮುದ್ರ ದಂಡೆಯ ಗುಡ್ಡ ಕಲ್ಲ ಮೇಲೆ ಕುಳಿತು ಧ್ಯಾನ ತಪದಲ್ಲಿ ತೊಡಗಿದ್ದ. ಒಂದು ಶಿಷ್ಯರ ಗುಂಪು ಗುರುವನ್ನು ಹುಡುಕಿಕೊಂಡು ಬರುವಾಗ ಈ ಸನ್ಯಾಸಿಯನ್ನು ನೋಡಿ ಆಕರ್ಷಿತರಾಗಿ ಅವರಿಗೆ ಅಡ್ಡ ಬಿದ್ದು ನಮಸ್ಕರಿಸಿದರು.

“ನಮಗೆ ಜ್ಞಾನೋದಯವಾಗಬೇಕಾಗಿದೆ ನಾವು ಏನು ಮಾಡಬೇಕು?” ಎಂದು ಕೇಳಿದರು.

“ನೀವು ಎರಡು ಗುಂಪುಗಳಾಗಿ, ಒಂದು ಗುಂಪು ಈ ದಡದಲ್ಲಿ, ಇನ್ನೊಂದು ಗುಂಪು ಸಮುದ್ರದಾಚೆಯ ದಡದಲ್ಲಿ ಇರಿ. ನೀವು ಮಾಡಬೇಕಾದದು ಇಷ್ಟೆ, ಸಮುದ್ರ ಬೇಸರವಿಲ್ಲದೆ ನೊರೆಯಿಂದ ಸತ್ಯದ ಲಿಪಿ ಬರೆಯುತ್ತಲೇ ಇರುತ್ತದೆ. ಸೂರ್ಯನ ಕಿರಣದಲ್ಲಿ ಒಣಗಿಹೋಗುವ ಮುನ್ನ ಅದನ್ನು ಓದಿಕೊಂಡು ಆಚೆಯ ದಡದ ನಿಮ್ಮ ಸ್ನೇಹಿತರಿಗೆ ಹೇಳಿ, ಇದು ನಿರಂತರ ಸಾಗುತ್ತಿರಲಿ.

ಆಚೆಯ ದಡದ ನಿಮ್ಮ ಸ್ನೇಹಿತರು ಮಾಡಬೇಕಾದುದು ಇಷ್ಟೆ. ಸಮುದ್ರ, ಮರಳು ದಂಡೆಯ ಮೇಲೆ ಅಲೆಯ ನೊರೆ ಹಾಕುವುದರೊಳಗೆ ಮರಳನ್ನು ಎಣಿಸಿ ಅದರ ಮೊತ್ತದ ಗಣಿತವನ್ನು ನಿಮಗೆ ಸಮುದ್ರ ದಾಟಿ ಬಂದು ಹೇಳಲಿ, ನಿಮಗೆ ಈರ್ವರಿಗೂ ಜ್ಞಾನೋದಯವು ಶತಸಿದ್ಧ” ಎಂದ ಸನ್ಯಾಸಿ.

“ಜ್ಞಾನೋದಯ ಇಷ್ಟೇನೇನಾ?” ಎಂದರು ಶಿಷ್ಯರ ಗುಂಪು.

“ನಾವೇಕೆ ಸಮುದ್ರ ದಾಟಿ ಶ್ರಮಪಡಬೇಕು. ಬಂಡೆ ಮೇಲೆ ಅಲೆ ಬರೆದ ನೊರೆ ಲಿಪಿಯಲ್ಲಿ ಏನಿತ್ತು ಎಂಬುದನ್ನು ಅಲೆಯಿಂದ ಮರಳು ಒದ್ದೆಯಾಗುವ ಮುನ್ನ ಎಷ್ಟು ಮರಳಿನ ಹರಳಿತ್ತು ಎಂಬುದನ್ನು ಸೂರ್ಯನನ್ನ ಕೇಳಿದರೆ ನಮಗೆ ಜ್ಞಾನೋದಯವಾಗುವುದಿಲ್ಲವೇ?” ಎಂದರು ಶಿಷ್ಯಕೋಟಿ.

“ನಿಮ್ಮ ದಾರಿ ನಿಮಗಿರುವಾಗ, ನಿಮಗೇಕೆ ಗುರು ಮತ್ತು ಜ್ಞಾನೋದಯ”, ಎಂದರು ಗುಡ್ಡದ ಸನ್ಯಾಸಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...