ಕಲ್ಲು ಮಣ್ಣು

ಯಾವುದಕ್ಕೂ ಬಗ್ಗದ ಕುಗ್ಗದ ಕಲ್ಲಾದರೆ ನೀನು
ಮಳೆಗೆ ಬಳಿದು ಹೋಗುವ
ಬಿಸಿಲಿಗೆ ಬೂದಿಯಾಗುವ ಮಣ್ಣು ನಾನು
ನೀನು ನಿರ್ವಿಕಾರ ಅಚಲ
ನಾನು ನೀರಿನೊಡನೆ ವಿಕಾರವಾಗುವ ಕೆಸರು
ಹುಡಿಯಾಗಿ ಗಾಳಿಯಲ್ಲಿ ಸಂಚಲ

ನೀನು ನೆನೆದುಕೊಂಡು ಗಟ್ಟಿಯಾದೆ
ನಾನು ಒತ್ತಡಗಳಿಗೆ ಮೈಕೊಟ್ಟು ಮೆತ್ತಗಾದೆ
ಮೂಲ ಒಂದೇ ಏನೋ ಎಂಬುದು ಅನುಮಾನ
ಊರ್ಧ್ವಲೋಕಗಳು ಅಲ್ಲಿಯ ದೇವಾನುದೇವತೆಗಳು
ಮುಂಜಾವಿನಲ್ಲಿ ಇಬ್ಬನಿಯಾಗಿ
ಹೊತ್ತೇರಿದಂತೆಲ್ಲಾ ಆವಿಯಾಗಿ
ನಡುಹಗಲಲ್ಲಿ ಉಳಿಯುವುದು ಧಾರಾಳವಾಗಿ ನಾನು ನೀನು
ನನ್ನಿಂದ ಹಿಡಿದು ಒಳಗೆ ಹೋದಂತೆಲ್ಲಾ
ಗಟ್ಟಿಯಾಗುತ್ತ ಹಿರಣ್ಯಗರ್ಭನಾದೆ
ಅಥವಾ ಗರ್ಭದಿಂದಲೇ ಪಿಸುಗುಟ್ಟಿ ಜೀವ
ಹೊರ ಬಂದು ಭೂಮೈ ತುಂಬಿದೆಯೇನೋ
ನನ್ನಂತೆ ನೀನೇಕೆ ತೊಳಲಾಡಬೇಕು
ನೀನು ಕಲ್ಲಾಗಿಯೇ ಇರು
ನಾನು ಮಣ್ಣಿನ ಕೂಸಾಗಿಯೇ ಇರುತ್ತೇನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಂದೆ ಮಗ
Next post ಸೂರ್ಯನೂ ಮಾಗಬಹುದಲ್ಲಾ?

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys