ಕಲ್ಲು ಮಣ್ಣು

ಯಾವುದಕ್ಕೂ ಬಗ್ಗದ ಕುಗ್ಗದ ಕಲ್ಲಾದರೆ ನೀನು
ಮಳೆಗೆ ಬಳಿದು ಹೋಗುವ
ಬಿಸಿಲಿಗೆ ಬೂದಿಯಾಗುವ ಮಣ್ಣು ನಾನು
ನೀನು ನಿರ್ವಿಕಾರ ಅಚಲ
ನಾನು ನೀರಿನೊಡನೆ ವಿಕಾರವಾಗುವ ಕೆಸರು
ಹುಡಿಯಾಗಿ ಗಾಳಿಯಲ್ಲಿ ಸಂಚಲ

ನೀನು ನೆನೆದುಕೊಂಡು ಗಟ್ಟಿಯಾದೆ
ನಾನು ಒತ್ತಡಗಳಿಗೆ ಮೈಕೊಟ್ಟು ಮೆತ್ತಗಾದೆ
ಮೂಲ ಒಂದೇ ಏನೋ ಎಂಬುದು ಅನುಮಾನ
ಊರ್ಧ್ವಲೋಕಗಳು ಅಲ್ಲಿಯ ದೇವಾನುದೇವತೆಗಳು
ಮುಂಜಾವಿನಲ್ಲಿ ಇಬ್ಬನಿಯಾಗಿ
ಹೊತ್ತೇರಿದಂತೆಲ್ಲಾ ಆವಿಯಾಗಿ
ನಡುಹಗಲಲ್ಲಿ ಉಳಿಯುವುದು ಧಾರಾಳವಾಗಿ ನಾನು ನೀನು
ನನ್ನಿಂದ ಹಿಡಿದು ಒಳಗೆ ಹೋದಂತೆಲ್ಲಾ
ಗಟ್ಟಿಯಾಗುತ್ತ ಹಿರಣ್ಯಗರ್ಭನಾದೆ
ಅಥವಾ ಗರ್ಭದಿಂದಲೇ ಪಿಸುಗುಟ್ಟಿ ಜೀವ
ಹೊರ ಬಂದು ಭೂಮೈ ತುಂಬಿದೆಯೇನೋ
ನನ್ನಂತೆ ನೀನೇಕೆ ತೊಳಲಾಡಬೇಕು
ನೀನು ಕಲ್ಲಾಗಿಯೇ ಇರು
ನಾನು ಮಣ್ಣಿನ ಕೂಸಾಗಿಯೇ ಇರುತ್ತೇನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಂದೆ ಮಗ
Next post ಸೂರ್ಯನೂ ಮಾಗಬಹುದಲ್ಲಾ?

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…