Home / ಕಥೆ / ಕಿರು ಕಥೆ / ಗುರುಗಳ ಹಿರಿಮೆ

ಗುರುಗಳ ಹಿರಿಮೆ

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವಹೇಳನ ಮಾಡುತ್ತಿದ್ದರು.

ಆ ಊರಿಗೆ ಒಬ್ಬ ಸಾಧು ಬಂದರು. ಮಠಗಳ ನಡುವೆ, ಗುರುಗಳ ನಡುವೆ, ಶಿಷ್ಯರ ನಡುವೆ ಇರುವ ಈರ್ಷೆ ವೈಷಮ್ಯ, ಅಹಂಭಾವ, ಹೆಮ್ಮೆ ನೋಡಿ ಮರುಗುತಿದ್ದರು.

ಒಮ್ಮೆ ಅಲ್ಲಿ ಸಾಧು ಸಂತರ, ಗುರುಗಳ ಸಮ್ಮೇಳನ ನಡೆಯಿತು. ಎಲ್ಲಾ ಮಠಾಧೀಶರು ತಮಗಾಗಿ ಅಲಂಕರಿಸಿದ ಪೀಠಗಳಲ್ಲಿ ಆಸೀನರಾದರು. ಅವರವರ ಶಿಷ್ಯರು ವಂದಿಮಾಗದಿಗರಂತ ಅವರ ಬಗ್ಗೆ ಹಿರಿಮೆಯಿಂದ ಹೇಳುತಿದ್ದರು.

“ನಮ್ಮ ಮಠಾಧೀಶರು, ಸಾರ್ವಭೌಮ, ಬೆಟ್ಟವನ್ನು ಭುಜದಲ್ಲಿ ಹೊತ್ತವರು.” ಎಂದ ಓರ್ವ ಮಠದ ಶಿಷ್ಯ.

“ನಮ್ಮ ಮಠಾಧೀಶರು ಆಕಾಶವನ್ನೇ ತಲೆಯಲ್ಲಿ ಹೊತ್ತವರು” ಎಂದ.

ಮತ್ತೊರ್ವ ಶಿಷ್ಯ ಅತಿ ಹೆಮ್ಮೆಯಿಂದ ಇದೆಲ್ಲಾ, ಏನು ಮಹಾ? ”ನಮ್ಮ ಮಠಾಧೀಶರು ನದಿಯ ಒಂದು ದಡದಲ್ಲಿ ಕುಳಿತು ಇನ್ನೊಂದು ದಡದಲ್ಲಿ ಇರುವವರಿಗೆ ಉಪದೇಶಮಾಡುತ್ತಾರೆ” ಎಂದ.

“ನಿಮ್ಮ ಮಠಾಧೀಶರು ಏನು? ನಮ್ಮ ಗುರುಗಳು ನಕ್ಷತ್ರಗಳಿಂದ ದೇವರನ್ನು ಪೂಜಿಸುತ್ತಾರೆ” ಎಂದ ಮತ್ತೋರ್ವ.

ಅಲ್ಲಿ ನೆರದಿದ್ದ ಅತಿ ಸಾಮಾನ್ಯ ಸಾಧುವಿನ ಶಿಷ್ಯನೊಬ್ಬ ಎದ್ದು ನಿಂತು ಹೇಳಿದ- ”ನಮ್ಮ ಸಾಧು ಗುರುಗಳು ಮುಚ್ಚಿದ ಕಣ್ಣನ್ನು ತೆರೆಯಲು ಕಲಿಸಿದ್ದಾರೆ. ಮುಚ್ಚಿದ ಎದೆಯ ಬಾಗಿಲನ್ನು ತೆರೆಯಲು ಕಲಿಸಿದ್ದಾರೆ. ನಿರ್ಭಯ ಸತ್ಯ ಆಡುವದನ್ನು ಕಲಿಸಿದ್ದಾರೆ. ಹೆಚ್ಚೇಕೆ ಶಾಂತಿ ಬಾಳ್ವೆ ಮಾಡಿ ಬದುಕುವುದನ್ನು ಕಲಿಸಿದ್ದಾರೆ. ಈ ಸಾಮಾನ್ಯ ಪವಾಡಗಳು ನಮ್ಮ ಬಾಳಿಗೆ ಅಸಾಮಾನ್ಯ ಹಿರಿಮೆ ತಂದಿದೆ.” ಎಂದರು. – ಬೇರೆ ಮಠಾಧೀಶರು ತಲೆಗೆ ಮುಸುಕನ್ನು ಎಳೆದುಕೊಂಡು ತಮ್ಮ ತಮ್ಮ ಮಠಗಳಿಗೆ ತೆರಳಿದರು.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...