Home / ಕಥೆ / ಕಿರು ಕಥೆ / ಗುರುಗಳ ಹಿರಿಮೆ

ಗುರುಗಳ ಹಿರಿಮೆ

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವಹೇಳನ ಮಾಡುತ್ತಿದ್ದರು.

ಆ ಊರಿಗೆ ಒಬ್ಬ ಸಾಧು ಬಂದರು. ಮಠಗಳ ನಡುವೆ, ಗುರುಗಳ ನಡುವೆ, ಶಿಷ್ಯರ ನಡುವೆ ಇರುವ ಈರ್ಷೆ ವೈಷಮ್ಯ, ಅಹಂಭಾವ, ಹೆಮ್ಮೆ ನೋಡಿ ಮರುಗುತಿದ್ದರು.

ಒಮ್ಮೆ ಅಲ್ಲಿ ಸಾಧು ಸಂತರ, ಗುರುಗಳ ಸಮ್ಮೇಳನ ನಡೆಯಿತು. ಎಲ್ಲಾ ಮಠಾಧೀಶರು ತಮಗಾಗಿ ಅಲಂಕರಿಸಿದ ಪೀಠಗಳಲ್ಲಿ ಆಸೀನರಾದರು. ಅವರವರ ಶಿಷ್ಯರು ವಂದಿಮಾಗದಿಗರಂತ ಅವರ ಬಗ್ಗೆ ಹಿರಿಮೆಯಿಂದ ಹೇಳುತಿದ್ದರು.

“ನಮ್ಮ ಮಠಾಧೀಶರು, ಸಾರ್ವಭೌಮ, ಬೆಟ್ಟವನ್ನು ಭುಜದಲ್ಲಿ ಹೊತ್ತವರು.” ಎಂದ ಓರ್ವ ಮಠದ ಶಿಷ್ಯ.

“ನಮ್ಮ ಮಠಾಧೀಶರು ಆಕಾಶವನ್ನೇ ತಲೆಯಲ್ಲಿ ಹೊತ್ತವರು” ಎಂದ.

ಮತ್ತೊರ್ವ ಶಿಷ್ಯ ಅತಿ ಹೆಮ್ಮೆಯಿಂದ ಇದೆಲ್ಲಾ, ಏನು ಮಹಾ? ”ನಮ್ಮ ಮಠಾಧೀಶರು ನದಿಯ ಒಂದು ದಡದಲ್ಲಿ ಕುಳಿತು ಇನ್ನೊಂದು ದಡದಲ್ಲಿ ಇರುವವರಿಗೆ ಉಪದೇಶಮಾಡುತ್ತಾರೆ” ಎಂದ.

“ನಿಮ್ಮ ಮಠಾಧೀಶರು ಏನು? ನಮ್ಮ ಗುರುಗಳು ನಕ್ಷತ್ರಗಳಿಂದ ದೇವರನ್ನು ಪೂಜಿಸುತ್ತಾರೆ” ಎಂದ ಮತ್ತೋರ್ವ.

ಅಲ್ಲಿ ನೆರದಿದ್ದ ಅತಿ ಸಾಮಾನ್ಯ ಸಾಧುವಿನ ಶಿಷ್ಯನೊಬ್ಬ ಎದ್ದು ನಿಂತು ಹೇಳಿದ- ”ನಮ್ಮ ಸಾಧು ಗುರುಗಳು ಮುಚ್ಚಿದ ಕಣ್ಣನ್ನು ತೆರೆಯಲು ಕಲಿಸಿದ್ದಾರೆ. ಮುಚ್ಚಿದ ಎದೆಯ ಬಾಗಿಲನ್ನು ತೆರೆಯಲು ಕಲಿಸಿದ್ದಾರೆ. ನಿರ್ಭಯ ಸತ್ಯ ಆಡುವದನ್ನು ಕಲಿಸಿದ್ದಾರೆ. ಹೆಚ್ಚೇಕೆ ಶಾಂತಿ ಬಾಳ್ವೆ ಮಾಡಿ ಬದುಕುವುದನ್ನು ಕಲಿಸಿದ್ದಾರೆ. ಈ ಸಾಮಾನ್ಯ ಪವಾಡಗಳು ನಮ್ಮ ಬಾಳಿಗೆ ಅಸಾಮಾನ್ಯ ಹಿರಿಮೆ ತಂದಿದೆ.” ಎಂದರು. – ಬೇರೆ ಮಠಾಧೀಶರು ತಲೆಗೆ ಮುಸುಕನ್ನು ಎಳೆದುಕೊಂಡು ತಮ್ಮ ತಮ್ಮ ಮಠಗಳಿಗೆ ತೆರಳಿದರು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...