Home / ಕಥೆ / ಕಿರು ಕಥೆ / ಗುರುಗಳ ಹಿರಿಮೆ

ಗುರುಗಳ ಹಿರಿಮೆ

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವಹೇಳನ ಮಾಡುತ್ತಿದ್ದರು.

ಆ ಊರಿಗೆ ಒಬ್ಬ ಸಾಧು ಬಂದರು. ಮಠಗಳ ನಡುವೆ, ಗುರುಗಳ ನಡುವೆ, ಶಿಷ್ಯರ ನಡುವೆ ಇರುವ ಈರ್ಷೆ ವೈಷಮ್ಯ, ಅಹಂಭಾವ, ಹೆಮ್ಮೆ ನೋಡಿ ಮರುಗುತಿದ್ದರು.

ಒಮ್ಮೆ ಅಲ್ಲಿ ಸಾಧು ಸಂತರ, ಗುರುಗಳ ಸಮ್ಮೇಳನ ನಡೆಯಿತು. ಎಲ್ಲಾ ಮಠಾಧೀಶರು ತಮಗಾಗಿ ಅಲಂಕರಿಸಿದ ಪೀಠಗಳಲ್ಲಿ ಆಸೀನರಾದರು. ಅವರವರ ಶಿಷ್ಯರು ವಂದಿಮಾಗದಿಗರಂತ ಅವರ ಬಗ್ಗೆ ಹಿರಿಮೆಯಿಂದ ಹೇಳುತಿದ್ದರು.

“ನಮ್ಮ ಮಠಾಧೀಶರು, ಸಾರ್ವಭೌಮ, ಬೆಟ್ಟವನ್ನು ಭುಜದಲ್ಲಿ ಹೊತ್ತವರು.” ಎಂದ ಓರ್ವ ಮಠದ ಶಿಷ್ಯ.

“ನಮ್ಮ ಮಠಾಧೀಶರು ಆಕಾಶವನ್ನೇ ತಲೆಯಲ್ಲಿ ಹೊತ್ತವರು” ಎಂದ.

ಮತ್ತೊರ್ವ ಶಿಷ್ಯ ಅತಿ ಹೆಮ್ಮೆಯಿಂದ ಇದೆಲ್ಲಾ, ಏನು ಮಹಾ? ”ನಮ್ಮ ಮಠಾಧೀಶರು ನದಿಯ ಒಂದು ದಡದಲ್ಲಿ ಕುಳಿತು ಇನ್ನೊಂದು ದಡದಲ್ಲಿ ಇರುವವರಿಗೆ ಉಪದೇಶಮಾಡುತ್ತಾರೆ” ಎಂದ.

“ನಿಮ್ಮ ಮಠಾಧೀಶರು ಏನು? ನಮ್ಮ ಗುರುಗಳು ನಕ್ಷತ್ರಗಳಿಂದ ದೇವರನ್ನು ಪೂಜಿಸುತ್ತಾರೆ” ಎಂದ ಮತ್ತೋರ್ವ.

ಅಲ್ಲಿ ನೆರದಿದ್ದ ಅತಿ ಸಾಮಾನ್ಯ ಸಾಧುವಿನ ಶಿಷ್ಯನೊಬ್ಬ ಎದ್ದು ನಿಂತು ಹೇಳಿದ- ”ನಮ್ಮ ಸಾಧು ಗುರುಗಳು ಮುಚ್ಚಿದ ಕಣ್ಣನ್ನು ತೆರೆಯಲು ಕಲಿಸಿದ್ದಾರೆ. ಮುಚ್ಚಿದ ಎದೆಯ ಬಾಗಿಲನ್ನು ತೆರೆಯಲು ಕಲಿಸಿದ್ದಾರೆ. ನಿರ್ಭಯ ಸತ್ಯ ಆಡುವದನ್ನು ಕಲಿಸಿದ್ದಾರೆ. ಹೆಚ್ಚೇಕೆ ಶಾಂತಿ ಬಾಳ್ವೆ ಮಾಡಿ ಬದುಕುವುದನ್ನು ಕಲಿಸಿದ್ದಾರೆ. ಈ ಸಾಮಾನ್ಯ ಪವಾಡಗಳು ನಮ್ಮ ಬಾಳಿಗೆ ಅಸಾಮಾನ್ಯ ಹಿರಿಮೆ ತಂದಿದೆ.” ಎಂದರು. – ಬೇರೆ ಮಠಾಧೀಶರು ತಲೆಗೆ ಮುಸುಕನ್ನು ಎಳೆದುಕೊಂಡು ತಮ್ಮ ತಮ್ಮ ಮಠಗಳಿಗೆ ತೆರಳಿದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...